Advertisement

Lok Sabha elections: ಹಾಸನ ಮೈತ್ರಿ ಅಭ್ಯರ್ಥಿ ವಿರುದ್ಧ ಮುಂದುವರಿದ ಪ್ರೀತಂ ಮುನಿಸು

09:09 PM Apr 04, 2024 | Team Udayavani |

ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲ್ಗೊಂಡರೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ಗೈರಾಗಿದ್ದರು.

Advertisement

ಬುಧವಾರ ಸಂಜೆಯಷ್ಟೇ ಹಾಸನದಲ್ಲಿ ಬಿಜೆಪಿ ಮುಖಂಡರ ಸಭೆ ನಡೆಸಿ ವಿಜಯೇಂದ್ರ ಅವರನ್ನು ಅದ್ಧೂರಿಯಾಗಿ ಸ್ವಾಗತಿಸೋಣ ಎಂದು ಹೇಳಿದ್ದ ಪ್ರೀತಂ ಗೌಡ ಅವರು ಗುರುವಾರ ಮಾತ್ರ ಎಲ್ಲೂ ಕಾಣಿಸಿಕೊಳ್ಳಲಿಲ್ಲ. ಆ ಮೂಲಕ ಜೆಡಿಎಸ್‌ ಮೇಲೆ ಅವರಿಗಿರುವ ಮುನಿಸನ್ನು  ಅವರು ಮುಂದುವರಿಸಿದ್ದಾರೆ. ಪ್ರೀತಂ ಗೌಡ ಅವರ ಹಿಂಬಾಲಕರಾಗಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ಧೇಶ್‌ ನಾಗೇಂದ್ರ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದರೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ದೂರ ಉಳಿದರು.

Advertisement

Udayavani is now on Telegram. Click here to join our channel and stay updated with the latest news.

Next