Advertisement

HDD, HDK ವಿರುದ್ಧ ಪ್ರೀತಂ ಗೌಡ ಪರೋಕ್ಷ ವಾಗ್ಧಾಳಿ

10:51 PM Feb 04, 2024 | Team Udayavani |

ಪಾಂಡವಪುರ: ದೇಶದಲ್ಲಿ ಕುಟುಂಬ ರಾಜಕಾರಣ ದೊಡ್ಡ ಪಿಡುಗಾಗಿದ್ದು, ಪ್ರಾದೇಶಿಕ ಪಕ್ಷಗಳಲ್ಲಿ ಕುಟುಂಬ ರಾಜಕಾರಣ ಹೆಚ್ಚಾಗಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರೀತಂ ಗೌಡ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು.

Advertisement

ತಾಲೂಕಿನ ಕೆನ್ನಾಳು ಗೇಟ್‌ ಬಳಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಜರಗಿದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ತನ್ನದೆ ಆದ ತತ್ವ, ಸಿದ್ಧಾಂತವಿದೆ. ಆದರೆ ಬೇರೆ ಪಕ್ಷಗಳು ತಮ್ಮ ಕುಟುಂಬಕ್ಕಾಗಿಯೇ ಪಕ್ಷ ಕಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಹಾಗಾಗಿ ನಮ್ಮ ಸಂಕಲ್ಪ ಏನಿದ್ದರೂ ಕುಟುಂಬ ರಾಜಕಾರಣದ ವಿರುದ್ಧ ಎಂದರು.
ಮಂಡ್ಯ ಜಿಲ್ಲೆಯ ಜನರು ಹೃದಯವಂತರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗಟ್ಟಿಗೊಳಿಸಬೇಕೆಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next