Advertisement

ಚಿತ್ರೀಕರಣದ ವೇಳೆ ಅವಘಡ: ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಕಾಲಿಗೆ ಬಲವಾದ ಪೆಟ್ಟು

09:29 AM Jun 26, 2023 | Team Udayavani |

ಕೊಚ್ಚಿ: ಚಿತ್ರೀಕರಣದ ವೇಳೆ ಅವಘಡ ಸಂಭವಿಸಿಮಾಲಿವುಡ್‌ ಸಿನಿಮಾರಂಗದ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಅವರ ಕಾಲಿಗೆ ಬಲವಾದ ಪೆಟ್ಟು ಬಿದ್ದಿರುವ ಘಟನೆ ಕೊಚ್ಚಿನ್‌ನಲ್ಲಿರುವ ಮರಯೂರ್ ನಲ್ಲಿ ಭಾನುವಾರ (ಜೂ.25 ರಂದು) ನಡೆದಿದೆ.

Advertisement

ಭಾನುವಾರ ನಟ ಪೃಥ್ವಿರಾಜ್ ಸುಕುಮಾರನ್ ʼವಿಲಾಯತ್ ಬುದ್ಧʼ ಎನ್ನುವ ಸಿನಿಮಾದ ಆ್ಯಕ್ಷನ್‌ ದೃಶ್ಯವನ್ನು ಚಿತ್ರೀಕರಣವನ್ನು ಮಾಡುವ ವೇಳೆ ಅವರ ಕಾಲಿಗೆ ಗಾಯವಾಗಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪೃಥ್ವಿರಾಜ್ ಸುಕುಮಾರನ್ ಕೊನೆಯದಾಗಿ ಶಾಜಿ ಕೈಲಾಸ್ ನಿರ್ದೇಶನದ ಮಲಯಾಳಂ ಚಿತ್ರ ʼಕಾಪಾʼದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿರುವ ಪೃಥ್ವಿರಾಜ್ ಚಿತ್ರೀಕರಣದಲ್ಲಿರುವಾಗ ಈ ಅವಘಡ ಸಂಭವಿಸಿದೆ.

ಸದ್ಯ ವೈದ್ಯರು ಪೃಥ್ವಿರಾಜ್ ಅವರನ್ನು ಪರೀಕ್ಷಿಸಿದ್ದು, ಶಸ್ತ್ರಚಿಕಿತ್ಸೆಯನ್ನು ಮಾಡಬೇಕೆಂದು ಹೇಳಿದ್ದಾರೆ. ಇಂದು (ಜೂ.26 ರಂದು) ಶಸ್ತ್ರಚಿಕಿತ್ಸೆ ನಡೆಯಲಿದೆ. ಆ ಬಳಿಕ ಅವರು ಕೆಲ ವಾರಗಳ ಕಾಲ ವಿಶ್ರಾಂತಿಯನ್ನು ಪಡೆಯಬೇಕೆಂದು ವೈದ್ಯರು ಹೇಳಿದ್ದಾರೆ.

ಪೃಥ್ವಿರಾಜ್ ಸುಕುಮಾರನ್ ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ಅವರ ʼಸಲಾರ್ʼ ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಳ್ಳಲಿದ್ದಾರೆ. ʼಆಡುಜ್ಜೀವಿತಂʼ ಕೂಡ ಒಂದೆರಡು ತಿಂಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

Advertisement

ʼವಿಲಾಯತ್ ಬುದ್ಧʼ ಚಿತ್ರವನ್ನು ಜಯನ್ ನಂಬಿಯಾರ್ ನಿರ್ದೇಶಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next