Advertisement

ಬಿಆರ್‌ಟಿಎಸ್‌ ರಸ್ತೆಯಲ್ಲಿ ಖಾಸಗಿ ವಾಹನ ನಿಷೇಧ

01:15 PM Jun 28, 2019 | Team Udayavani |

ಧಾರವಾಡ: ಹು-ಧಾ ಅವಳಿನಗರಗಳ ಮಧ್ಯೆ ಬಿಆರ್‌ಟಿಎಸ್‌ ಬಸ್‌ ಸಂಚಾರಕ್ಕಾಗಿ ನಿರ್ಮಿಸಿರುವ ವಿಶೇಷ ಕಾರಿಡಾರ್‌ ರಸ್ತೆಯಲ್ಲಿ ಖಾಸಗಿ ವಾಹನಗಳು ಸಂಚರಿಸದಂತೆ ಭದ್ರತಾ ಸಿಬ್ಬಂದಿಗಳನ್ನು ನೇಮಿಸಿ ಜು.1ರಿಂದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಬಿಆರ್‌ಟಿಎಸ್‌ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಹೇಳಿದರು.

Advertisement

ನಗರದಲ್ಲಿ ಗುರುವಾರ ಬಿಆರ್‌ಟಿಎಸ್‌ ಕಾರಿಡಾರ್‌ ರಸ್ತೆ ಪರಿಶೀಲನೆ ಸಂದರ್ಭದಲ್ಲಿ ಕೋರ್ಟ್‌ ವೃತ್ತದಲ್ಲಿರುವ ಬಿಆರ್‌ಟಿಎಸ್‌ ಬಸ್‌ ನಿಲ್ದಾಣದಲ್ಲಿ ಅವರು ಮಾತನಾಡಿದರು.

ಧಾರವಾಡ ಮಿತ್ರ ಸಮಾಜದಿಂದ ಹುಬ್ಬಳ್ಳಿಯವರೆಗೆ ಬಿಆರ್‌ಟಿಎಸ್‌ ಬಸ್‌ ಸಂಚಾರಕ್ಕಾಗಿ 24ಕಿಮೀ ರಸ್ತೆ ನಿರ್ಮಿಸಲಾಗಿದೆ. 31 ಬಸ್‌ ನಿಲ್ದಾಣ ಆರಂಭಿಸಲಾಗಿದೆ.21 ಜಂಕ್ಷನ್‌ ಮಾಡಲಾಗಿದೆ. ಬಸ್‌ಗಳ ಸುಗಮ ಸಂಚಾರಕ್ಕಾಗಿ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಜರುಗಿಸಲು 70 ಹೋಮ್‌ಗಾರ್ಡ್‌, 120 ಸೆಕ್ಯೂರಿಟಿ ಗಾರ್ಡ್‌ ಮತ್ತು ಪೊಲೀಸ್‌ ಕಮಿಷನರೇಟ್ದಿಂದ 70 ಪೊಲೀಸ್‌ ಪೇದೆಗಳನ್ನು ನೇಮಿಸಲಾಗಿದೆ. ಬಸ್‌ ನಿಲ್ದಾಣ ಸೇರಿದಂತೆ ರಸ್ತೆಯುದ್ದಕ್ಕೂ ಇರುವ ಪ್ರಮುಖ ಸ್ಥಳಗಳಲ್ಲಿ ಸುಮಾರು 68 ಸಿಸಿ ಕ್ಯಾಮರಾ ಅಳವಡಿಸಲಾಗಿದೆ ಎಂದರು.

ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್‌ ಆಯುಕ್ತ ಡಾ| ಶಿವಕುಮಾರ ಗುಣಾರೆ, ಎಸಿಪಿ ಎಸ್‌.ಎಂ.ಸಂದಿಗವಾಡ, ಸಿಪಿಐ ಮುರಗೇಶ ಚನ್ನಣ್ಣವರ, ಎನ್‌ಡಬ್ಲೂಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ, ಸಾರಿಗೆ ಅಧಿಕಾರಿ ಕೆಂಪಣ್ಣ ಗುಡೆನ್ನವರ, ಬಿಆರ್‌ಟಿಎಸ್‌ನ ಉಪ ಪ್ರಧಾನ ವ್ಯವಸ್ಥಾಪಕ ಗಣೇಶ ರಾಠೊಡ ಸೇರಿದಂತೆ ಬಿಆರ್‌ಟಿಎಸ್‌, ಎನ್‌ಡಬ್ಲೂಕೆಎಸ್‌ಆರ್‌ಟಿಸಿ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next