Advertisement

ಸಚಿವ ರಾಮುಲು ಅವರೊಂದಿಗೆ ಖಾಸಗಿ ಬಸ್‌ ಮಾಲಕರ ಒಕ್ಕೂಟದ ಸಭೆ

11:13 PM Mar 23, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಓಡಾಡುತ್ತಿರುವ ಮಜಲು ವಾಹನ ಬಸ್‌ಗಳ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಅವರ ನೇತೃತ್ವದಲ್ಲಿ ಅವರ ಕಚೇರಿಯಲ್ಲಿ ಬುಧವಾರ ರಾಜ್ಯ ಬಸ್‌ ಮಾಲಕರ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಸಕ ಕೆ. ರಘುಪತಿ ಭಟ್‌ ಅವರು ಭಾಗವಹಿಸಿ ಖಾಸಗಿ ಬಸ್‌ ಮಾಲಕರ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಿದರು.

Advertisement

ರಾಜ್ಯದಲ್ಲಿ ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳ ಅನಾರೋಗ್ಯಕರ ಪೈಪೋಟಿ, ದರ ಸಮರ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಎಲ್ಲ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಿ ರಾಜ್ಯದಲ್ಲಿ ಖಾಸಗಿ ಹಾಗೂ ಸರಕಾರಿ ಬಸ್‌ಗಳು ಸೌಹಾರ್ದತೆಯಿಂದ ಜನಸ್ನೇಹಿಯಾಗಿ ಸಂಚರಿಸುವ ಬಗ್ಗೆ ನಿರ್ದೇಶನ ನೀಡುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದರು.

ಇದನ್ನೂ ಓದಿ:ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ: ಸಿಎಂ ಬೊಮ್ಮಾಯಿ

ಸಾರಿಗೆ ಆಯುಕ್ತ ಶಿವಕುಮಾರ್‌, ಜಂಟಿ ಆಯುಕ್ತ ಹೇಮಂತ್‌ ಕುಮಾರ್‌, ಬಸ್‌ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಪ್ರಧಾನ ಕಾರ್ಯದರ್ಶಿ ಕೆ.ಕೆ. ಬಾಲಕೃಷ್ಣ, ಕಾರ್ಯದರ್ಶಿ ವಿಕ್ರಂ, ಉಪಾಧ್ಯಕ್ಷ ಅಜ್ಜಪ್ಪ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next