Advertisement

ರಾಜ್ಯದಲ್ಲಿ ಖಾಸಗಿ ಬಸ್ ಸಂಚಾರ ದರ ಏರಿಕೆ

09:48 PM May 22, 2020 | Hari Prasad |

ಮಂಗಳೂರು: ರಾಜ್ಯದಲ್ಲಿ ಶೇ.15ರಷ್ಟು ಬಸ್ ದರ ಏರಿಸಿ ಶುಕ್ರವಾರದಿಂದ ಖಾಸಗಿ ಬಸ್‌ಗಳ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವುದಾಗಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದಾರೆ.

Advertisement

ಆದರೆ, ಈ ಬಗ್ಗೆ ಸರಕಾರದಿಂದ ಅಧಿಕೃತ ಮಾಹಿತಿ ದೊರೆತ ಬಳಿಕವಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭಿಸುವ ಬಗ್ಗೆ ಜಿಲ್ಲೆಯ ಖಾಸಗಿ ಬಸ್ ಮಾಲಕರು ನಿರ್ಧರಿಸಿದ್ದಾರೆ.

ಈ ಬಗ್ಗೆ ರಾಜ್ಯಬಸ್ ಮಾಲಕರ ಒಕ್ಕೂಟದ ಅಧ್ಯಕ್ಷ ರಾಜವರ್ಮ ಬಲ್ಲಾಾಳ್ ಅವರು ‘ಉದಯವಾಣಿಗೆ ಪ್ರತಿಕ್ರಿಯಿಸಿ, ‘ಶೇ.15ರಷ್ಟು ಬಸ್ ದರ ಹೆಚ್ಚಳ ನಮ್ಮ ಬೇಡಿಕೆಯಾಗಿತ್ತು. ಸಾರಿಗೆ ಸಚಿವರು ಒಪ್ಪಿಗೆ ನೀಡದರೆ ಸಾಲದು, ಬದಲಾಗಿ ಈ ಬಗ್ಗೆ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಬೇಕು.

ಸಚಿವರು ಈ ಹಿಂದೆ ಖಾಸಗಿ ಬಸ್ ರಸ್ತೆ ತೆರಿಗೆ ವಿನಾಯಿತಿ ಘೋಷಿಸಿದ್ದು, ಈ ಬಗ್ಗೆ ರಾಜ್ಯ ಸರಕಾರ ಇನ್ನೂ ಅಧಿಸೂಚನೆ ಪ್ರಕಟವಾಗಿಲ್ಲ. ಅಧಿಸೂಚನೆ ಹೊರಡಿಸಿದ ಬಳಿಕವಷ್ಟೇ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಶನಿವಾರ ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 7ರವರೆಗೆ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ರವಿವಾರ ಖಾಸಗಿ ಹಾಗೂ ನಿಗದಿತ ಸರಕಾರಿ ಬಸ್ ಸಂಚಾರವೂ ಇರುವುದಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next