Advertisement

ಸೋಂಕು ಪೀಡಿತರಿಗೆ ಪ್ಲಾಸ್ಮಾ ಥೆರಪಿಗೆ ಮುಂದಾದ ದಿಲ್ಲಿ

01:32 AM Apr 17, 2020 | Hari Prasad |

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ವೈರಸ್ ಪೀಡಿತರ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿಯನ್ನು ಪ್ರಾಯೋಗಿಕವಾಗಿ ಬಳಸಲು ನಿರ್ಧರಿಸಲಾಗಿದೆ.

Advertisement

ಇದಕ್ಕಾಗಿ ಕೇಂದ್ರ ಸರಕಾರದ ಅನುಮತಿ ಪಡೆಯಲಾಗಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.

ಮಹಾರಾಷ್ಟ್ರ ಬಿಟ್ಟರೆ ಅತಿ ಹೆಚ್ಚು ಕೋವಿಡ್ ಸೋಂಕು ಪತ್ತೆಯಾಗಿರುವುದು ದಿಲ್ಲಿಯಲ್ಲಿ. ದೆಹಲಿಯಲ್ಲಿ 1,500ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪಾಸಿಟಿವ್‌ ವರದಿ ಬಂದಿದೆ.

ಹೀಗಾಗಿ, ಸೋಂಕಿನ ಅಪಾಯ ಹೆಚ್ಚಿರುವವರ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿಯನ್ನು ಬಳಸಲು ಯೋಜಿಸಲಾಗಿದೆ. ಕೆಲವು ವೈದ್ಯರು ಈ ನಿಟ್ಟಿನಲ್ಲಿ ಕಾರ್ಯ ಕೈಗೊಂಡಿದ್ದಾರೆ. ಇದರಲ್ಲಿ ನಾವು ಯಶಸ್ಸು ಕಾಣಲಿದ್ದೇವೆ ಎಂಬ ಆಶಾಭಾವ ಹೊಂದಿದ್ದೇವೆ ಎಂದು ಕೇಜ್ರಿವಾಲ್ ಅವರು ಗುರುವಾರ ಹೇಳಿದರು.

ಕೆಲವು ದೇಶಗಳಲ್ಲಿ ಈ ಥೆರಪಿ ಉತ್ತಮ ಫ‌ಲಿತಾಂಶ ನೀಡಿದೆ. ಕೇರಳ ಮತ್ತು ಮಹಾರಾಷ್ಟ್ರದಲ್ಲೂ ಈ ನಿಟ್ಟಿನಲ್ಲಿ ಯತ್ನಗಳು ನಡೆದಿವೆ. ಆದರೆ, ಲಸಿಕೆ ಕಂಡು ಹಿಡಿದರೆ ಮಾತ್ರ ಕೋವಿಡ್ ವೈರಸನ್ನು ಶಾಶ್ವತವಾಗಿ ಹೊಡೆದಾಡಿಸಲು ಸಾಧ್ಯ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next