Advertisement

ಖಾಸಗಿ ಸುದ್ದಿವಾಹಿನಿ ವರದಿಗಾರ ಆತ್ಮಹತ್ಯೆ

01:17 AM Jun 06, 2019 | Team Udayavani |

ಬೆಂಗಳೂರು: ಖಾಸಗಿ ಸುದ್ದಿ ವಾಹಿನಿಯೊಂದರ ಕೆ.ಆರ್‌.ಪುರಂನ ವರದಿಗಾರ ನಯಾಜ್‌ ಖಾನ್‌(37) ಎಂಬವರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಕೆ.ಆರ್‌.ಪುರಂನ ದೇವಸಂದ್ರದಲ್ಲಿರುವ ತಮ್ಮ ಮನೆಯ ಕೊಠಡಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಕೋಲಾರ ಜಿಲ್ಲೆ ಚಿಂತಾಮಣಿ ತಾಲೂಕಿನ ನಯಾಜ್‌ ಖಾನ್‌ ಎಂಟು ವರ್ಷಗಳಿಂದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು.

ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬುಧವಾರ ಬೆಳಗ್ಗೆ ಆರು ಗಂಟೆ ಸುಮಾರಿಗೆ ಕೊಠಡಿಯ ಬಾಗಿಲು ತೆರೆದಾಗ ವಿಚಾರ ಬೆಳಕಿಗೆ ಬಂದಿದೆ. ನಯಾಜ್‌ ಖಾನ್‌ ಅವರಿಗೆ ಪತ್ನಿ, ಇಬ್ಬರು ಹೆಣ್ಣು ಮತ್ತು ಒಂದು ಗಂಡು ಮಗು ಇದೆ. ಕೆ.ಆರ್‌.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next