Advertisement

ಉದ್ಯಮಿಗೆ ಬ್ಲ್ಯಾಕ್‌ ಮೇಲ್‌: ಖಾಸಗಿ ಸುದ್ದಿ ವಾಹಿನಿಯ ಸಿಇಓ ಬಂಧನ!

01:33 PM Apr 15, 2017 | |

ಬೆಂಗಳೂರು : ಉದ್ಯಮಿಯೊಬ್ಬರಿಗೆ ಹಣಕ್ಕಾಗಿ ಬೇಡಿಕೆ ಇಟ್ಟು  ಬ್ಲ್ಯಾಕ್‌ ಮೇಲ್‌ ಮಾಡಿದ ಆರೋಪದಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. 

Advertisement

ಉದ್ಯಮಿಯ ಅಕ್ರಮಗಳನ್ನು ಮುಂದಿಟ್ಟುಕೊಂಡು ಸಣ್ಣ  ತುಣುಕನ್ನು ಪ್ರಸಾರ ಮಾಡಿ 15 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ಹೇಳಲಾಗಿದೆ.

ಉದ್ಯಮಿ ಮುಂಗಡವಾಗಿ ಹಣ ನೀಡಲು ವಾಹಿನಿಯ ಕಚೇರಿಗೆ ತೆರಳಿದಾಗ ರೆಡ್‌ ಹ್ಯಾಂಡ್‌ ಆಗಿ ಸಿಇಓ ಮತ್ತು ಸಹಾಯಕನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. 

ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌ ಸುದ್ದಿಗಾರರಿಗೆ ಬಂಧನದ ವಿಚಾರವನ್ನು ತಿಳಿಸಿದ್ದಾರೆ. 

ಐಪಿಸಿ ಸೆಕ್ಷನ್‌ 384,385 ಮತ್ತು 506 ರ ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next