Advertisement
ಇದರಿಂದಾಗಿ, ತೆರಿಗೆಗಳು, ಇತರೆ ಕಂದಾಯ ಪಾವತಿ ವ್ಯವಸ್ಥೆಗಳು, ಪಿಂಚಣಿ ಪಾವತಿ, ಸಣ್ಣ ಉಳಿತಾಯ ಯೋಜನೆಗಳು ಮತ್ತಿತರ ಸರ್ಕಾರ ಸಂಬಂಧಿ ವಹಿವಾಟುಗಳನ್ನು ನಡೆಸಲು ಎಲ್ಲ ಖಾಸಗಿ ಬ್ಯಾಂಕುಗಳಿಗೂ ಮುಕ್ತ ಅವಕಾಶ ನೀಡಿದಂತಾಗಿದೆ. ಈವರೆಗೆ ಕೆಲವೇ ಕೆಲವು ಖಾಸಗಿ ಬ್ಯಾಂಕುಗಳಿಗಷ್ಟೇ ಈ ಅವಕಾಶವಿತ್ತು. ಆದರೆ, ಈಗ ನಿರ್ಬಂಧವನ್ನು ತೆರವುಗೊಳಿಸಿರುವ ಕಾರಣ, ಎಲ್ಲ ಖಾಸಗಿ ವಲಯದ ಬ್ಯಾಂಕುಗಳು ಕೂಡ ದೇಶದ ಆರ್ಥಿಕತೆ, ಸಾಮಾಜಿಕ ವಲಯದ ಅಭಿವೃದ್ಧಿಯಲ್ಲಿ ಕೈಜೋಡಿಸಬಹುದಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ.
Related Articles
ಸರ್ಕಾರಿ ವಹಿವಾಟು ನಡೆಸಲು ಖಾಸಗಿ ಬ್ಯಾಂಕುಗಳಿಗಿದ್ದ ನಿರ್ಬಂಧ ತೆರವಾಗಿದ್ದು ಬುಧವಾರ ಮುಂಬೈ ಷೇರುಪೇಟೆಯಲ್ಲಿ ಮಿಂಚಿನ ಸಂಚಲನ ಉಂಟುಮಾಡಿತು. ಬ್ಯಾಂಕಿಂಗ್ ಹಾಗೂ ಹಣಕಾಸು ಕ್ಷೇತ್ರಗಳ ಖರೀದಿ ಭರಾಟೆಯಲ್ಲಿ ಹೂಡಿಕೆದಾರರು ತೊಡಗಿದ ಕಾರಣ, ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 1,030.28 ಅಂಕಗಳ(ಶೇ.2.07) ಏರಿಕೆ ದಾಖಲಿಸಿ, ದಿನಾಂತ್ಯಕ್ಕೆ 50,781.69ರಲ್ಲಿ ವಹಿವಾಟು ಕೊನೆಗೊಳಿಸಿತು. ನಿಫ್ಟಿ 274.20 ಅಂಕಗಳಷ್ಟು ಹೆಚ್ಚಳವಾಗಿ, 14,982ರಲ್ಲಿ ಅಂತ್ಯಗೊಂಡಿತು. ಸೆನ್ಸೆಕ್ಸ್ ಪ್ಯಾಕ್ನಲ್ಲಿ ಆ್ಯಕ್ಸಿಸ್ ಬ್ಯಾಂಕ್ ಅತಿ ಹೆಚ್ಚು ಲಾಭ ಗಳಿಸಿದರೆ, ಎಚ್ಡಿಎಫ್ಸಿ ಬ್ಯಾಂಕ್, ಎಚ್ಡಿಎಫ್ಸಿ, ಐಸಿಐಸಿಐ ಬ್ಯಾಂಕ್, ಬಜಾಜ್ ಫೈನಾನ್ಸ್ ಮತ್ತು ಎಸ್ಬಿಐ ಷೇರು ಮೌಲ್ಯಗಳೂ ಜಿಗಿತ ಕಂಡವು.
Advertisement
ತಾಂತ್ರಿಕ ದೋಷದಿಂದ ತೊಂದರೆಬುಧವಾರ ವಹಿವಾಟು ಆರಂಭವಾದ ಬಳಿಕ ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್(ಎನ್ಎಸ್ಇ)ನಲ್ಲಿ ತಾಂತ್ರಿಕ ತೊಂದರೆಯಿಂದಾಗಿ ವಹಿವಾಟನ್ನು ಅರ್ಧಕ್ಕೇ ಸ್ಥಗಿತಗೊಳಿಸಬೇಕಾದ ಸ್ಥಿತಿ ಎದುರಾಯಿತು. ಇನ್ನೇನು ಮಧ್ಯಾಹ್ನ 3.30ಕ್ಕೆ ಎಂದಿನಂತೆ ವಹಿವಾಟಿನ ಅವಧಿ ಮುಗಿಯುತ್ತದೆ ಎಂದುಕೊಳ್ಳುವಾಗಲೇ, ಅವಧಿಯನ್ನು ಸಂಜೆ 5 ಗಂಟೆಯವರೆಗೆ ವಿಸ್ತರಿಸುತ್ತಿರುವುದಾಗಿ ಬಿಎಸ್ಇ ಮತ್ತು ಎನ್ಎಸ್ಇ ಘೋಷಿಸಿತು. ಚಿನ್ನದ ದರ ಇಳಿಕೆ
ದೆಹಲಿ ಚಿನಿವಾರ ಮಾರುಕಟ್ಟೆಯಲ್ಲಿ ಬುಧವಾರ ಚಿನ್ನದ ದರ 148 ರೂ. ಇಳಿಕೆಯಾಗಿ, 10 ಗ್ರಾಂಗೆ 46,307 ರೂ. ಆಗಿದೆ. ಬೆಳ್ಳಿ ದರ 886 ರೂ. ಕಡಿಮೆಯಾಗಿ ಕೆಜಿಗೆ 68,676 ರೂ.ಗೆ ತಲುಪಿದೆ. ಈ ನಡುವೆ, ಡಾಲರ್ ಎದುರು ರೂಪಾಯಿ ಮೌಲ್ಯ 11 ಪೈಸೆ ಏರಿಕೆಯಾಗಿ 72.35ಕ್ಕೆ ತಲುಪಿದೆ.