Advertisement

Gopalaswamy Hill: ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನ: ಆಕ್ರೋಶ

02:47 PM Aug 16, 2023 | Team Udayavani |

ಗುಂಡ್ಲುಪೇಟೆ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಬಂಧವಿದ್ದರೂ ಕೆಲವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಖಾಸಗಿ ವಾಹನದಲ್ಲಿ ದೇವಸ್ಥಾನಕ್ಕೆ ಹೋಗುವ ಮೂಲಕ ನಿಯಮ ಉಲ್ಲಂಘಿಸಿದ್ದಾರೆ.

Advertisement

ಕಳೆದ 9ವರ್ಷದಿಂದ ಯಾವುದೇ ಖಾಸಗಿ ವಾಹನ ಗೋಪಾಲಸ್ವಾಮಿ ಬೆಟ್ಟದ ಮೇಲೆ ಹೋಗಿರಲಿಲ್ಲ. ಆದರೆ ಮಂಡ್ಯದ ಶಾಸಕರು ಹಾಗೂ ಬೆಂಬಲಿಗರಿಗೆ ಪ್ರವೇಶಕ್ಕೆ ಅಧಿಕಾರಿಗಳು ದಾರಿ ಮಾಡಿಕೊಟ್ಟಿದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸ್ಥಳೀಯ ಶಾಸಕರೂ ಈ ಹಿಂದೆ ಬೆಟ್ಟಕ್ಕೆ ಬಂದಿದ್ದ ಸಂದರ್ಭದಲ್ಲಿ ಇಡಿಸಿ(ಇಕೋ ಡೆವಲಪ್‌ಮೆಂಟ್‌ ಕಮಿಟಿ) ವಾಹನದಲ್ಲಿ ಚಲಿಸಿದ್ದಾರೆ. ಹೀಗೆ ಅಧಿಕಾರ ದುರುಪಯೋಗ ಪಡಿಸಿಕೊಂಡು ಬೆಟ್ಟಕ್ಕೆ ಖಾಸಗಿ ವಾಹನ ಬಿಡುವುದಾದಾರೆ ಎಲ್ಲರಿಗೂ ಅವಕಾಶ ಕಲ್ಪಿಸಲಿ ಎಂಬುದು ಸ್ಥಳೀಯರ ಒತ್ತಾಯ.

ಈ ಬಗ್ಗೆ ಗೋಪಾಲಸ್ವಾಮಿ ಬೆಟ್ಟ ವಲಯದ ಅರಣ್ಯಾಧಿಕಾರಿ ಮಂಜುನಾಥ್‌ ಪ್ರತಿಕ್ರಿಯೆ ನೀಡಿ, ಮಂಡ್ಯದ ಶಾಸಕರು ಬಂದಿದ್ದರು. ಹೀಗಾಗಿ ಅವಕಾಶ ಮಾಡಿಕೊಡಲಾಗಿದೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next