Advertisement

Karnataka Polls ಈ ಬಾರಿ ಜಯಭೇರಿ ಖಚಿತ: ಪ್ರಿಯಕೃಷ್ಣ

05:57 PM Apr 20, 2023 | Team Udayavani |

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಉಮೇದುದಾರರಾಗಿ ಪ್ರಿಯಕೃಷ್ಣ ಅವರು ನಾಮಪತ್ರ ಸಲ್ಲಿಸಿದರು. ಕ್ಷೇತ್ರದ ಪ್ರಮುಖ ಬೀದಿಗಳಲ್ಲಿ ಬೃಹತ್‌ ರ್ಯಾಲಿ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್‌ 140ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದು ನಿಶ್ಚಿತ. ತಾನು ಸಹ ಗೋವಿಂದರಾಜನಗರದಲ್ಲಿ ಈ ಬಾರಿ ಜಯಭೇರಿ ಭಾರಿಸುವುದು ಖಚಿತ. ಬಿಜೆಪಿಯ ಭ್ರಷ್ಟ ಸರ್ಕಾರದಿಂದ ಜನ ಬೇಸತ್ತಿದ್ದು ತಾವು ಲಕ್ಷ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

ಗೋವಿಂದರಾಜಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಹೊರಟ ಪ್ರಿಯಕೃಷ್ಣ ಅವರಿಗೆ ದಾರಿಯೂದ್ದಕ್ಕೂ ಕೈ ಕಾರ್ಯಕರ್ತರು ಹೂವಿನ ಹಾರ ಹಾಕಿ, ಹೂ ಮಳೆಗರೆದು ಕುಣಿದು ಕುಪ್ಪಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next