Advertisement

ಪ್ರಿಯಕೃಷ್ಣ  ಜನ್ಮದಿನ ಸಂಭ್ರಮ

11:39 AM Apr 28, 2018 | |

ಬೆಂಗಳೂರು: ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಶುಭಾಶಯ ಕೋರಿದರು.

Advertisement

ಗೋವಿಂದರಾಜನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯೂ ಆಗಿರುವ ಪ್ರಿಯಕೃಷ್ಣ ಅವರಿಗೆ ಕ್ಷೇತ್ರದಾದ್ಯಂತ ಹುಟ್ಟುಹಬ್ಬದ ಶುಭಾಷಯಗಳ ಮಹಾಪೂರವೇ ಹರಿದು ಬಂದಿತು. ಹುಟ್ಟುಹಬ್ಬ ಶುಭಾಷಯ ಸಲ್ಲಿಕೆಗೆ ಬಂದಿದ್ದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಈ ಬಾರಿಯ ಚುನಾವಣೆಯಲ್ಲೂ ಗೆದ್ದು ಬರುವಂತೆ ಹಾರೈಸಿದರು.

ವಿಜಯನಗರ ಹಾಗೂ ಗೋವಿಂದರಾಜನಗರ ಕ್ಷೇತ್ರದಿಂದ ಆಗಮಿಸಿದ್ದ ಕಾಂಗ್ರೆಸ್‌ ಪಾಲಿಕೆ ಸದಸ್ಯರು, ಕಾರ್ಯಕರ್ತರು, ಮುಖಂಡರು ಹುಟ್ಟುಹಬ್ಬ ಪ್ರಯುಕ್ತ ಪ್ರಿಯಕೃಷ್ಣ ಅವರಿಗೆ ಹಾರ ಹಾಕಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಿಯಕೃಷ್ಣ, ಕ್ಷೇತ್ರದ ಜನತೆ ತಮ್ಮ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾನು ಋಣಿ. ಕ್ಷೇತ್ರದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಮತ್ತೂಮ್ಮೆ ಅವರ ಆಶೀರ್ವಾದ ಪಡೆಯಲು ಮುಂದಾಗಿದ್ದೇನೆ.  ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next