Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರ ನಿರಂತರವಾಗಿ ಹಗರಣ ನಡೆದಿಲ್ಲ ಎಂದು ಹೇಳುತ್ತಿದೆ. ಮೇ.20ರಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಕಾಂಗ್ರೆಸ್ ನವರಿಗೆ ಕೆಲಸ ಇಲ್ಲ ಎಂದಿದ್ದರು. ಆದರೆ, ಮೇ 11ರಂದು ಈ ಪ್ರಕರಣದಲ್ಲಿನ ತನಿಖಾಧಿಕಾರಿಗಳಾದ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಮುಖ್ಯಕಾರ್ಯಾಚರಣೆ ಅಧಿಕಾರಿ ಪ್ರಾಥಮಿಕ ವರದಿ ಸಲ್ಲಿಸಿದ್ದು, ಭ್ರಷ್ಟಾಚಾರ ಆಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಮಂತ್ರಿಗಳಿಗೆ ತಮ್ಮ ಇಲಾಖೆಯಲ್ಲಿ ಏನಾಗುತ್ತಿದೆ ಎಂಬುದು ಗೊತ್ತಿಲ್ಲವೇ ಅತವಾ ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿದ್ದಾರೆಯೇ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.
Related Articles
Advertisement
ಇಲಾಖೆಯ ಆಂತರಿಕ ತನಿಖೆಯಲ್ಲೇ ಭ್ರಷ್ಟಾಚಾರ ನಡೆದಿರುವ ಮಾಹಿತಿ ಬಂದಿದೆ ಎಂದರೆ, ನ್ಯಾಯಾಂಗ ತನಿಖೆಗೆ ಕೊಟ್ಟರೆ ಎಲ್ಲರ ಹೆಸರೂ ಬರುತ್ತದೆ ಎಂದು ಹೇಳಿದರು.
ಕಟೀಲ್ ಅವರು ದೊಡ್ಡ ಭಾಷಣ ಮಾಡುತ್ತಾರೆ. ಆದರೆ ಬಿಟ್ ಕಾಯಿನ್, ಪಿಎಸ್ ಐ ಹಗರಣ, ಗಂಗಾ ಕಲ್ಯಾಣ ಹಗರಣದ ಬಗ್ಗೆ ಮಾತನಾಡಿದರೆ ಮೌನವಾಗುತ್ತಾರೆ. ಇದಕ್ಕೆ ನಿಮ್ಮ ಉತ್ತರವೇನು ಎಂದು ಪ್ರಶ್ನಿಸಿದರು.