Advertisement

25 ಜನ ಸಂಸದರನ್ನು ಆರಿಸಿ ಕಳುಹಿಸಿದ್ದಕ್ಕಾಗಿ ಕನ್ನಡಿಗರಿಗೆ ಈ ಶಿಕ್ಷೆಯೇ? ಖರ್ಗೆ ಪ್ರಶ್ನೆ

04:02 PM Sep 03, 2020 | keerthan |

ಬೆಂಗಳೂರು: ಜಿಎಸ್ ಟಿಯಲ್ಲಿ ರಾಜ್ಯದ ಪಾಲು ಮತ್ತು ಪರಿಹಾರ ಪಾವತಿಸುವ ಬದಲಿಗೆ ಆರ್ ಬಿಐನಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ನೀಡಿರುವ ಸಲಹೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಿಎಸ್ ಟಿ ತೆರಿಗೆ ವಸೂಲಿಯಲ್ಲಿ ಉಂಟಾಗುವ ನಷ್ಟವನ್ನು 2020ರವರೆಗೆ ಕಟ್ಟಿಕೊಡುವ ಬದ್ಧತೆಯನ್ಜು ಕೇಂದ್ರ 2017ರ ಜಿಎಸ್ ಟಿ ಕಾಯ್ದೆಯಲ್ಲಿ ವ್ಯಕ್ತಪಡಿಸಿದೆ. ಅದರಂತೆ ನಡೆದುಕೊಳ್ಳಬೇಕಿದೆ ಎಂದು ಒತ್ತಾಯಿಸಿದ್ದಾರೆ.

ವ್ಯಾಟ್ ಜಾರಿಯಲ್ಲಿದ್ದಾಗ ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು ಸಿಗುತ್ತಿತ್ತು. ಯುಪಿಎ ಸರ್ಕಾರ ರೂಪಿಸಿದ್ದ ಉತ್ತಮ GST ಕಾಯ್ದೆಯನ್ನು ನರೇಂದ್ರ ಮೋದಿ ಅವರ ಸರ್ಕಾರ ಅವೈಜ್ಞಾನಿಕವಾಗಿ ಬದಲಾವಣೆ ಮಾಡಿ ಜಾರಿಗೆ ತಂದಿದೆ.  ಇದರಿಂದ ಆರ್ಥಿಕ ವ್ಯವಸ್ಥೆಗೆ ಹಾನಿಯಾಗಲಿದೆ ಎಂದು ಕಾಂಗ್ರೆಸ್ ಮೊದಲಿನಿಂದಲೂ ಹೇಳುತ್ತಾ ಬಂದಿದೆ. ಪ್ರತಿಪಕ್ಷಗಳ ಮಾತನ್ನು ಕೇಳಿಸಿಕೊಳ್ಳದ ಸರ್ವಾಧಿಕಾರಿ ಧೋರಣೆಯ ಕೇಂದ್ರ ಸರ್ಕಾರ, ತಾನು ಮಾಡಿದ ತಪ್ಪಿಗೆ ದೇಶದ ಜನ ದಂಡ ಕಟ್ಟಬೇಕೆಂದು ಬಯಸುತ್ತಿರುವುದು ಅಸಹನೀಯ ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯದ ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ದಂಧೆ ಮಟ್ಟ ಹಾಕಲು ಕ್ರಮ: ಗೃಹ ಸಚಿವ ಬೊಮ್ಮಾಯಿ

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಆರ್ಥಿಕ ಕುಸಿತ ಶುರುವಾಗಿದ್ದು, ಈಗ ಕೋವಿಡ್ ನೆಪ ಇಟ್ಟುಕೊಂಡು ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಭಾವನಾತ್ಮಕ ವಿಷಯಗಳನ್ನು ಕೇಂದ್ರಿಕರಿಸಿ ಧ್ವೇಷ ರಾಜಕೀಯದಿಂದ ಅಭಿವೃದ್ಧಿಯನ್ನು ಹಳ್ಳ ಹಿಡಿಸಿದ ಬಿಜೆಪಿ, ತಾನು ಮಾಡಿದ ತಪ್ಪಿಗೆ ಜನ ದಂಡ ಕಟ್ಟಬೇಕೆಂದು ಬಯಸುತ್ತಿರುವುದು ಹಿಟ್ಲರ್ ಧೋರಣೆ ಎಂದು ಆರೋಪಿಸಿದ್ದಾರೆ.

Advertisement

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಪಕ್ಷದ ಮುಲಾಜಿಗೆ ಒಳಗಾಗದೆ, ರಾಜ್ಯದ ಹಿತದೃಷ್ಟಿಯಿಂದ ಕೇಂದ್ರ ಸಚಿವರ ಸಲಹೆಯನ್ನು ಸರಾಸಗಟಾಗಿ ತಿರಸ್ಕರಿಸಬೇಕಿದೆ. ಕೇಂದ್ರ ಹಣಕಾಸು ಸಚಿವೆ ಸಲಹೆ ಒಪ್ಪಿಕೊಂಡು ಸಾಲ ಪಡೆದಿದ್ದೆ ಆದರೆ ಅದರ ಬಡ್ಡಿ ಹೊರೆಯನ್ನು ರಾಜ್ಯದ ಜನರು ಹೊರಬೇಕಾಗುತ್ತದೆ. ನಮ್ಮ ತೆರಿಗೆಯನ್ನು ಕೊಟ್ಟು, ಅದರ ಹಿಡಗಂಟಿನ ಮೇಲೆ ಸಾಲ ಪಡೆದು, ಅದಕ್ಕೆ ಮತ್ತೆ ನಾವೇ ಬಡ್ಡಿ ಕಟ್ಟುವುದು ಎಂತಹ ಶಿಕ್ಷೆ. 25 ಜನ ಸಂಸದರನ್ನು ಆರಿಸಿ ಕಳುಹಿಸಿದ್ದಕ್ಕಾಗಿ ಕನ್ನಡಿಗರಿಗೆ ಈ ಶಿಕ್ಷೆಯೇ ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ಬೊಕ್ಕಸಕ್ಕೆ ಸಾಲದ ಹೊರೆ ಹೊರಿಸಿದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಅತಿವೃಷ್ಠಿ, ಅನಾವೃಷ್ಠಿಗಳಿಗೆ ಪರಿಹಾರ ಜೊತೆ ತೆರಿಗೆ ಪಾಲನ್ನೂ ನಿರಾಕರಿಸಿರುವ ಬಿಜೆಪಿಯ ಈ ನಡೆಯಿಂದಾಗಿ,  ಕನ್ನಡಿಗರಿಗೆ ಮೋದಿ ಜಿಎಸ್ ಟಿ ಜೊತೆಗೆ ಆರ್ ಬಿಐ ಸಾಲ + ಬಿಜೆಪಿ ಬಡ್ಡಿಯನ್ನೂ ಪಾವತಿಸುವ ಕರ್ಮ ಎದುರಾಗಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next