Advertisement

Priyank Kharge: ಸಿದ್ದು-ಡಿಕೆಶಿ ಬಂಧನಕ್ಕೆ ಬಿಜೆಪಿ ನಾಯಕರ ಹುನ್ನಾರ; ಪ್ರಿಯಾಂಕ್‌

08:47 PM Jul 27, 2024 | Team Udayavani |

ಕಲಬುರಗಿ: ರಾಜ್ಯ ಸರ್ಕಾರವನ್ನು ಶತಾಯ-ಗತಾಯ ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಇದರ ಹಿಂದೆ ಬಿಜೆಪಿಯ ದೊಡ್ಡ-ದೊಡ್ಡ ಘಟಾನುಘಟಿಗಳೇ ತಂತ್ರ ಹೆಣೆಯುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಮೂಡಾ ಹಾಗೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿಸಿ ಬಂಧಿಸುವ ಪ್ರಯತ್ನ ಮಾಡುತ್ತಿದ್ದಾರೆ. ದಾಖಲೆಗಳು, ಸಾಕ್ಷéಗಳು ಸಿಗದೇ ಇದ್ದಾಗ ಇ.ಡಿ. ಅಧಿಕಾರಿಗಳು ನಮ್ಮ ಶಾಸಕರ ಮೇಲೆ ಒತ್ತಡ ಹೇರಿ ಸಿದ್ದರಾಮಯ್ಯ-ಡಿಕೆಶಿ ಹೆಸರು ಹೇಳುವಂತೆ ಒತ್ತಾಯಿಸುತ್ತಿದ್ದಾರೆ. ಇದು ಕೇಂದ್ರದ ಹುನ್ನಾರವಾಗಿದೆ. ನಮ್ಮದು ಜನಾಶೀರ್ವಾದ ಇರುವ ಪಕ್ಷವಾಗಿದ್ದು, ಹೀಗೆ ಸುಳ್ಳುಗಳಿಂದ ಸರಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next