Advertisement

ಸಿಡಿ ರಾಜಕಾರಣ ಬಿಜೆಪಿ ಮುಕ್ತ ಕರ್ನಾಟಕಕ್ಕೆ ಮುನ್ನುಡಿ : ಶಾಸಕ ಪ್ರಿಯಾಂಕ್ ಖರ್ಗೆ ಟ್ವಿಟ್

05:01 PM Jan 14, 2021 | Team Udayavani |

ಕಲಬುರಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಾಗಿ ವಿವಾದವಾಗಿರುವ ಸಿಡಿಯು ಬಿಜೆಪಿ ಮುಕ್ತ ಕರ್ನಾಟಕಕ್ಕೆ ನಾಂದಿ ಹಾಡಲಿದೆ ಎಂದು ಚಿತ್ತಾಪುರ ಕ್ಷೇತ್ರದ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

Advertisement

ಬುಧವಾರ ನಡೆದ ಬಿಜೆಪಿ ಸರಕಾರದ ಮಂತ್ರಿ ಮಂಡಲ ವಿಸ್ತರಣೆ ಬೆನ್ನೆಲ್ಲೆ ಎದ್ದಿರುವ ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಮಾಜಿ ಸಚಿವರೂ ಆಗಿರುವ ಪ್ರಿಯಾಂಕ್ ಖರ್ಗೆ ಅವರು ಸಿಡಿ ರಾಜಕೀಯ ಕೇವಲ ಬಿಎಸ್ ವೈ ಮುಕ್ತ ಬಿಜೆಪಿಯಾಗುವಷ್ಟೇ ಅಲ್ಲದೇ ಬಿಜೆಪಿ ಮುಕ್ತ ಕರ್ನಾಟಕವಾಗುವುದಕ್ಕೆ ಮುನ್ನುಡಿಯಾಗುವಂತೆ ಕಂಡುಬರುತ್ತದೆ ಎಂದಿದ್ದಾರೆ.

ಮಂತ್ರಿಮಂಡಲದಲ್ಲಿ ಕಲಬುರಗಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗದಿರುವುದಕ್ಕೆ ಕುಟುಕಿರುವ ಅವರು, ಎಂದಿನಂತೆ ಮಂತ್ರಿಮಂಡಲದಲ್ಲಿ ಕಲಬುರಗಿ ಜಿಲ್ಲೆಗೆ ಪ್ರಾತಿನಿಧ್ಯ ದೊರಕದಿರುವುದು ಹಾಗೂ ಇಡೀ ಕಲ್ಯಾಣ ಕರ್ನಾಟಕ ದಿಂದ ಅಶಕ್ತ ಭಾವನೆಯಿಂದ ನೋಡಿರುವುದು ಪ್ರಾತಿನಿಧ್ಯ ನೀಡದಿರುವುದು ಹಾಗೂ ಬಿಜೆಪಿಯು ಕಲ್ಯಾಣ ಕರ್ನಾಟಕದ ಈ ಭಾಗವನ್ನು ಪ್ರಮುಖವೆಂದು ಪರಿಗಣಿಸಿಲ್ಲ ಎನ್ನುವುದನ್ನು ನಿರೂಪಿಸುತ್ತದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:ನಾವು 17 ಮಂದಿ ಶಾಸಕರು ಮತ್ತೊಮ್ಮೆ ಸಭೆ ಸೇರಲಿದ್ದೇವೆ: ಆರ್.ಶಂಕರ್

Advertisement

Udayavani is now on Telegram. Click here to join our channel and stay updated with the latest news.

Next