Advertisement

ಕಾಂಗ್ರೆಸ್ ಪಕ್ಷದ ಬತ್ತಳಿಕೆಯ ಕೊನೆಯ ಅಸ್ತ್ರ ಪ್ರಿಯಾಂಕಾ ಗಾಂಧಿ!

08:16 AM Feb 05, 2019 | Sharanya Alva |

ಶಿರಸಿ: ಕಾಂಗ್ರೆಸ್ ಪಕ್ಷದ ಬತ್ತಳಿಕೆಯಲ್ಲಿರುವ ಕೊನೆಯ ಅಸ್ತ್ರ ಪ್ರಿಯಾಂಕಾ ಗಾಂಧಿ ಎಂದು ಮತ್ತೆ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಪ್ರಿಯಾಂಕಾ ಗಾಂಧಿಯೊಂದಿಗೆ ಮಹಾಭಾರತ ಕೊನೆಗೊಳ್ಳಲಿದೆ ಎಂದು ವ್ಯಂಗ್ಯವಾಡಿದರು.

Advertisement

ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯನ್ನು ಇಂದಿರಾಗಾಂಧಿ ಎಂಬಂತೆ ವರ್ಣಿಸಲಾಗುತ್ತಿದೆ. ಇನ್ನೇನು ಪ್ರಿಯಾಂಕಾ ಬಂಡವಾಳ ಕೂಡಾ ಬಯಲಾಗಲಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷ ದೇಶದಲ್ಲಿ ಕುಟುಂಬ ರಾಜಕಾರಣ ಮಾಡುತ್ತಲೇ ದೇಹದ್ರೋಹಿಗಳನ್ನು ಬೆಳೆಸುತ್ತಿದೆ. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗದಲ್ಲಿ ರಾಷ್ಟ್ರದ್ರೋಹಿಗಳನ್ನು ಇಟ್ಟಿದೆ. ಮಾಧ್ಯಮಗಳಲ್ಲೂ ನಗರ ನಕ್ಸಲರನ್ನು ಇಟ್ಟಿರುವುದಾಗಿ ಗಂಭೀರವಾಗಿ ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next