Advertisement

ರಾಜ್ಯದಲ್ಲಿ ರೋಡ್‌ ಶೋಗೆ ಬನ್ನಿ ; ಪ್ರಿಯಾಂಕಾಗೆ ಕೈ ನಾಯಕರ ದುಂಬಾಲು

09:02 AM Apr 03, 2019 | Team Udayavani |

ಬೆಂಗಳೂರು : ಲೋಕಸಭಾ ಚುನಾವಣಾ ರಣಕಣದ ರಂಗು ದಿನದಿಂದ ದಿನಕ್ಕೆ ಏರುತ್ತಿದ್ದು , ಕಾಂಗ್ರೆಸ್‌ ಪಕ್ಷ ಜೆಡಿಎಸ್‌ ಮೈತ್ರಿಯೊಂದಿಗೆ ಬಿಜೆಪಿ ಪ್ರಾಬಲ್ಯದ ಕ್ಷೇತ್ರಗಳನ್ನು ಕೈವಶ ಮಾಡಿಕೊಳ್ಳಲು ಭಾರೀ ರಣತಂತ್ರಗಳನ್ನು ಹಣೆಯುತ್ತಿದ್ದು ಯುವ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳಲು ಪ್ರಯತ್ನ ಮಾಡಲಾಗಿದೆ.

Advertisement

ರಾಜ್ಯ ನಾಯಕರು ಪ್ರಿಯಾಂಕಾ ಅವರನ್ನು ಸಂಪರ್ಕಿಸಿದ್ದು ಬೆಂಗಳೂರು ನಗರ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ರೋಡ್‌ ಶೋ ನಡೆಸಲು ಕೇಳಿಕೊಂಡಿದ್ದಾರೆ.

ಮೂರು ಕ್ಷೇತ್ರಗಳಲ್ಲೂ ಪ್ರಬಲ ಸ್ಪರ್ಧೆ ಎದುರಾಗಿರುವ ಹಿನ್ನಲೆಯಲ್ಲಿ ಯುವ ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ನಾಯಕರು ಪ್ರಿಯಾಂಕಾ ಅವರನ್ನು ಸಂಪರ್ಕಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿರುಸಿನ ಪ್ರಚರಾನಲ್ಲಿ ನಿರತರಾಗಿರುವ ಪ್ರಿಯಾಂಕಾ ಕಾಂಗ್ರೆಸ್‌ ನಾಯಕರ ಮನವಿಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next