Advertisement

ಹಣದುಬ್ಬರವನ್ನು ಇಳಿಸಿ, ಜನರನ್ನು ಸಾಯಿಸುವುದನ್ನು ನಿಲ್ಲಿಸಿ : ಪ್ರಿಯಾಂಕ ಗಾಂಧಿ ಕಿಡಿ

06:11 PM Aug 03, 2021 | Team Udayavani |

ನವ ದೆಹಲಿ : ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿವೆ.

Advertisement

ಕಾಂಗ್ರೆಸ್  ನ ಪ್ರಧಾನ ಕಾರ್ಯದರ್ಶಿ ಹಾಗೂ  ಉತ್ತರ ಪ್ರದೇಶದ ಪೂರ್ವ ಭಾಗದ ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕ ಗಾಂಧಿ ವಾದ್ರಾ ಇಂದು(ಮಂಗಳವಾರ, ಆಗಸ್ಟ್ 3) ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ : ಪುತ್ತೂರು ಅರಣ್ಯ ಸಂಚಾರಿದಳದ ಕಾರ್ಯಾಚರಣೆ : ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಜಿಂಕೆ ಚರ್ಮ ವಶ

ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಟ್ವೀಟ್ ಮಾಡಿರುವ ಪ್ರಿಯಾಂಕ, ದೇಶದ ಜನತೆ ಹಣದುಬ್ಬರವನ್ನು ನಿಯಂತ್ರಣಕ್ಕೆ ತನ್ನಿ ಎಂದು ದೇಶದ ನಾಗರಿಕರು ಕೇಳುತ್ತಿದ್ದಾರೆ. ಹಣದುಬ್ಬರವನ್ನು ಇಳಿಸಿ, ಜನರನ್ನು ಸಂಕಷ್ಟದಲ್ಲಿ ಸಾಯಿಸುವುದನ್ನು ನಿಲ್ಲಿಸಿ, ಸಂಸತ್ ಅಧಿವೇಶನದಲ್ಲಿ ಅಗತ್ಯ ವಿಚಾರಗಳ ಬಗ್ಗೆ ಚರ್ಚೆ ಮಾಡಿ ಎಂದು ಅವರು ಕಿಡಿ ಕಾರಿದ್ದಾರೆ.

ತಮ್ಮ ಸಹೋದರ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪೆಟ್ರೋಲ್ ಹಾಗು ಡಿಸೇಲ್ ಬೆಲೆ ಏರಿಕೆಯ ವಿರುದ್ಧ ಕೈಗೊಂಡ ಸೈಕಲ್ ಮಾರ್ಚ್ ನ ಕುರಿತಾದ ವಿಡಿಯೋ ತುಣುಕೊಂದನ್ನು ಪೋಸ್ಟ್ ಮಾಡಿರುವ ಅವರು, ಇಂಧನ ಬೆಲೆ ಏರಿಕೆಯ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

Advertisement

ಸಂಸತ್ ಅಧಿವೇಶನಕ್ಕೂ ಮುನ್ನ ಸಂಸತ್ತಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಇಪ್ಪತ್ತೈದು ಲಕ್ಷ ಕೋಟಿಯಷ್ಟು ಹಣವನ್ನು ಕೇಂದ್ರ ಸರ್ಕಾರ ಇಂಧನ ತೆರಿಗೆ ರೂಪದಲ್ಲಿ ಜನರಿಂದ ಸಂಗ್ರಹಿಸುತ್ತದೆ. ಆ ಹಣವನ್ನು ಏನು ಮಾಡಲಾಗುತ್ತದೆ..? ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವಂತೂ ಬಳಸುತ್ತಿಲ್ಲ, ಜನರ ತೆರಿಗೆ ಹಣ ಎಲ್ಲಿಗೆ ಹೋಗುತ್ತಿದೆ..? ಎಂದು ಅವರು ಕೇಂದ್ರ ಸರ್ಕಾರವನ್ನು ಆರೋಪಿಸಿದ್ದರು.

ಬೆಲೆ ಏರಿಕೆ ಕುರಿತು ಪ್ರಿಯಾಂಕಾ ಗಾಂಧಿ ಕಳೆದ ವಾರ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಪ್ರಶ್ನಿಸಿದ್ದರು.  ಜನರಿಗೆ ಸಂಬಂಧಿಸಿದ ಬೆಲೆ ಏರಿಕೆಯಂತಹ ವಿಷಯಗಳ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಮೋದಿ ಸರ್ಕಾರ ಹೆದರುತ್ತದೆ “ಎಂದು ಟ್ವೀಟ್ ಮಾಡಿದ್ದರು.

ಜುಲೈ 19 ರಂದು ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದೆ.  ಸಂಸತ್ ಅಧಿವೇಶನ ಆರಂಭವಾದಾಗಿನಿಂದ ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳು ಕೃಷಿ ಕಾಯ್ದೆ, ಪೆಗಾಸಸ್ ಪ್ರಕರಣ ಹಾಗೂ ಇಂಧನ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆಯನ್ನು ನಡೆಸುತ್ತಿವೆ.

ಇನ್ನು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಗೊಂದಲಗಳ ನಡುವೆ, ರಾಜ್ಯಸಭೆಯ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಇಂದು(ಮಂಗಳವಾರ, ಆಗಸ್ಟ್ 3) ಸರ್ಕಾರ ಮತ್ತು ಪ್ರತಿಪಕ್ಷದ ನಾಯಕರನ್ನು ಸಂಸತ್ತಿನಲ್ಲಿನ ಸದ್ಯದ ಬಿಕ್ಕಟ್ಟನ್ನು ಪರಿಹರಿಸುವಂತೆ ಒತ್ತಾಯಿಸಿದರು.

 ಇದನ್ನೂ ಓದಿ : ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ರಸ್ತೆ ಬಂದ್ ಮಾಡಿದರೂ ಜನ ಕ್ಯಾರೇ ಎನ್ನಲ್ಲ

Advertisement

Udayavani is now on Telegram. Click here to join our channel and stay updated with the latest news.

Next