Advertisement

Bangladesh ಹಿಂದೂಗಳ,ಕ್ರಿಶ್ಚಿಯನ್ನರ ಸುರಕ್ಷತೆಗೆ ಒತ್ತಾಯಿಸಿದ ಪ್ರಿಯಾಂಕಾ ಗಾಂಧಿ

05:35 PM Aug 12, 2024 | Team Udayavani |

ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾಕರ ಮೇಲಿನ ನಿರಂತರ ದಾಳಿಯ ಸುದ್ದಿ ಆತಂಕಕಾರಿಯಾಗಿದೆ ಎಂದು ಸೋಮವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದು,ಮಧ್ಯಾಂತರ ಸರ್ಕಾರವು ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಬೌದ್ಧರ ಸುರಕ್ಷತೆಯನ್ನು ಖಚಿತಪಡಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Advertisement

ಯಾವುದೇ ನಾಗರಿಕ ಸಮಾಜದಲ್ಲಿ ಧರ್ಮ, ಜಾತಿ, ಭಾಷೆ ಅಥವಾ ಗುರುತಿನ ಆಧಾರದ ಮೇಲೆ ತಾರತಮ್ಯ, ಹಿಂಸಾಚಾರ ಮತ್ತು ದಾಳಿಗಳು ಸ್ವೀಕಾರಾರ್ಹವಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

‘ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾಕರ ಮೇಲೆ ನಡೆಯುತ್ತಿರುವ ನಿರಂತರ ದಾಳಿಯ ಸುದ್ದಿ ಆತಂಕಕಾರಿಯಾಗಿದೆ. ಯಾವುದೇ ಸುಸಂಸ್ಕೃತ ಸಮಾಜದಲ್ಲಿ ಧರ್ಮ, ಜಾತಿ, ಭಾಷೆ ಅಥವಾ ಗುರುತಿನ ಆಧಾರದ ಮೇಲೆ ತಾರತಮ್ಯ, ಹಿಂಸೆ ಮತ್ತು ದಾಳಿಗಳನ್ನು ಸ್ವೀಕಾರಾರ್ಹವಲ್ಲ ಎಂದು ಪ್ರಿಯಾಂಕಾ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next