Advertisement

Klaburgi: ಮೋದಿ ರಾಜ್ಯಕ್ಕೇನು ಕೊಟ್ಟಿದ್ದಾರೆ ಎಂದು ಹೇಳಲಿ: ಪ್ರಿಯಾಂಕ್‌ ಖರ್ಗೆ

11:02 PM Apr 11, 2024 | Team Udayavani |

ಕಲಬುರಗಿ: ಪ್ರಧಾನಿ ಮೋದಿ ಅವರು ಪ್ರವಾಸಿಗರಂತೆ ರಾಜ್ಯಕ್ಕೆ ಬರುವ ಬದಲು ಕರ್ನಾಟಕಕ್ಕೆ ಏನು ಕೊಟ್ಟಿದ್ದೇವೆ ಎಂದೂ ಹೇಳಿ ಹೋಗಲಿ. ಆಗ ನಮಗೂ ಸ್ವಲ್ಪ ಸಮಾಧಾನ ಆಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

Advertisement

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿ ಅವರು ಈ ದೇಶದ ಪ್ರಧಾನಿ. ಎಲ್ಲಿ ಬೇಕಾದರೂ ಬಂದು ಪ್ರಚಾರ ಮಾಡಲಿ. ಪ್ರಧಾನಿ ಇಲ್ಲಿಗೆ ಬರುತ್ತಿದ್ದಾರೆ ಎಂದರೆ ಜನರಿಗೆ ಅವರು ಏನು ಮಾಡಿದ್ದಾರೆ. ರಾಜ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳುವ ಕುತೂಹಲವಿರುತ್ತದೆ. ಹೀಗಾಗಿ ರಾಜ್ಯಕ್ಕೆ ಏನು ಕೊಟ್ಟಿದ್ದೇವೆ ಎಂದು ಹೇಳಲಿ. ಸುಮ್ಮನೆ ಕೇಂದ್ರದ ಪುರಸ್ಕೃತ ಯೋಜನೆಗಳು ಎಂದು ಹೇಳಿ ಹಿಟ್‌ ಅಂಡ್‌ ರನ್‌ ಮಾಡುವುದಲ್ಲ ಎಂದರು. ಲೋಕಸಭೆ ಚುನಾವಣೆಗೆ ಮೋದಿ ಮೊಟ್ಟ ಮೊದಲ ಚುನಾವಣೆ ಪ್ರಚಾರ ಮಾಡಿದ್ದೇ ಇಲ್ಲಿಂದ. ಕಳೆದ ವಿಧಾನಸಭೆ ಚುನಾವಣೆ ವೇಳೆಯೂ 20 ಸಲ ಬಂದು ಹೋಗಿದ್ದರು ಏನು ಪ್ರಯೋಜನವಾಯಿತು, ಜನ ನಂಬಿದರಾ? ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next