Advertisement

ಯೋಜನೆಗಳನ್ನು ಪಡೆದುಕೊಳ್ಳುವಲ್ಲಿ ಕೊರಗ ಸಮುದಾಯ ಹಿಂದೇಟು

07:50 AM Jul 05, 2018 | Team Udayavani |

ಕೋಟೇಶ್ವರ: ಕೊರಗ ಸಮುದಾಯದ ಅಭಿವೃದ್ಧಿಗೆ ಸರಕಾರ ಸಾಕಷ್ಟು ಯೋಜನೆಗಳನ್ನು ಅನುಷ್ಠಾನ ಗೊಳಿಸಿದೆ. ಆದರೆ ಅದನ್ನು ಪಡೆದು ಕೊಳ್ಳುವಲ್ಲಿ ಸಮುದಾಯ ಹಿಂದೇಟು ಹಾಕುತ್ತಿದೆ. ಶಿಕ್ಷಣದ ಕೊರತೆ, ಕೀಳರಿಮೆ, ಅಂಜಿಕೆಯಿಂದ ಯುವ ಜನತೆ ಕೂಡ ಮುಂದೆ ಬರುತ್ತಿಲ್ಲ. ಇದನ್ನು ಗಮನಿಸಿದ ಜಿಲ್ಲಾಡಳಿತ ಕೊರಗ ಸಮುದಾಯಕ್ಕೆ ಮನೋಸ್ಥೈರ್ಯ ನೀಡುವ ನಿಟ್ಟಿನಲ್ಲಿ ಆಯ್ದ ಗ್ರಾ.ಪಂ. ಮಟ್ಟದಲ್ಲಿ ಪ್ರತೀ ವಾರ ಸಭೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಮುಂದಾಗಿದೆ ಎಂದು  ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹೇಳಿದರು.

Advertisement

ಗೋಪಾಡಿ ಗ್ರಾ.ಪಂ., ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ,  ಕೊರಗ ಸಂಘಟನೆ ಉಡುಪಿ ಇವರ ಆಶ್ರಯದಲ್ಲಿ ರೋಶನಿ ಧಾಮದಲ್ಲಿ  ಜು. 4ರಂದು ನಡೆದ ಕೊರಗ ಸಮುದಾಯದ ಯುವ ಜನತೆಗೆ ಶೈಕ್ಷಣಿಕ ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೊರಗ ಸಮುದಾಯದ ವಿದ್ಯಾರ್ಥಿಗಳು 10ನೇ ತರಗತಿಗೆ ಮುಂಚೆ ಶಾಲೆ ಬಿಡುವುದು ಸರಿಯಲ್ಲ. ಕನಿಷ್ಠ 10ನೇ ತರಗತಿಯ ತನಕವಾದರೂ ಓದಬೇಕು. ಇವತ್ತು ನಿಮ್ಮಲ್ಲಿಯ ಕೌಶಲ್ಯ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಅವುಗಳನ್ನು ಸದುಪಯೋಗ ಮಾಡಿಕೊಳ್ಳಿ ಎಂದರು.

ನಿಮ್ಮ ಸಮುದಾಯದ ಕಲೆ, ಕರಕುಶಲ ಕೌಶಲಗಳು ಗೌರವಾರ್ಹವಾದುದು. ಅದನ್ನು ಸದ್ಬಳಕೆ ಮಾಡಿಕೊಳ್ಳಲು ಅವಕಾಶ ಗಳಿವೆ. ಕೊರಗ ಸಮುದಾಯದ  ವಿಚಾರದಲ್ಲಿ ಗೋಪಾಡಿ ಗ್ರಾ.ಪಂ.  ವಿಶೇಷ ಆಸಕ್ತಿ ವಹಿಸಿದೆ ಎಂದರು.

ಕೊರಗರು ಮುಗª ಜನರು ಕಾರ್ಯಕ್ರಮ ಉದ್ಘಾಟಿಸಿದ  ಜಿ.ಪಂ.ಸದಸ್ಯೆ ಶ್ರೀಲತಾ ಸುರೇಶ ಶೆಟ್ಟಿ ಮಾತನಾಡಿ, ಕೊರಗ ಸಮುದಾಯದ ಜನ ಬಹಳ ಮುಗ್ಧರು. ಇದನ್ನು ದುರುಪಯೋಗ ಮಾಡಿಕೊಳ್ಳುವ ಅಪಾಯವೂ ಇದೆ. ಅಂಜಿಕೆ, ಶಿಕ್ಷಣಕ್ಕೆ ಪ್ರಾಮುಖ್ಯತೆ ಕೊಡದೆ ಇರುವುದು, ಜಾಗೃತಿ ಕೊರತೆಯೂ ಅವರ ಪ್ರಗತಿಯ ಹಿನ್ನೆಡೆಗೆ ಕಾರಣ ಎಂದರು.

Advertisement

ಗ್ರಾ.ಪಂ.ಅಧ್ಯಕ್ಷೆ ಸರಸ್ವತಿ ಪುತ್ರನ್‌ ಅಧ್ಯಕ್ಷತೆ ವಹಿಸಿ ಮತನಾಡಿ,  ಗೋಪಾಡಿ ಗ್ರಾ.ಪಂ. ಕೊರಗ ಸಮುದಾಯದ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡಿದೆ. ಕೊರಗ ಕಾಲೊನಿಗಳಿಗೆ ಭೇಟಿ ನೀಡಿ ಅವರ ಸಮಸ್ಯೆ ಆಲಿಸಿದ್ದೇವೆ. ಸಾಧ್ಯವಾದಷ್ಟು ಪರಿಹಾರ ಮಾಡುವ ಕೆಲಸವೂ ಆಗಿದೆ. ಗೋಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ  8,9 ನೇ ತರಗತಿಗೆ ಶಾಲೆ ಬಿಟ್ಟ ಕೊರಗ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಟ್ಯೂಷನ್‌ ನೀಡಿ ಎಸೆಸೆಲ್ಸಿ ಪರೀಕ್ಷೆ ಯನ್ನು ಬರೆಸುವ ಕಾರ್ಯ ಮಾಡುತ್ತಿದ್ದೇವೆ. ಇದಕ್ಕೆ ಒಬ್ಬರು ನುರಿತ ಶಿಕ್ಷಕರ ಆವಶ್ಯಕತೆ ಇದೆ ಎಂದರು.

ಜಿ.ಪಂ. ಕಾರ್ಯನಿರ್ವಹಣಾ ಧಿಕಾರಿ ಶಿವಾನಂದ ಕಾಪಸಿ, ತಾ.ಪಂ. ಸದಸ್ಯೆ ವೈಲೆಟ್‌ ಬರೆಟ್ಟೋ, ಗ್ರಾ.ಪಂ. ಉಪಾಧ್ಯಕ್ಷೆ ಕಲ್ಪನಾ ಭಾಸ್ಕರ, ಕೊರಗ ಸಂಘಟನೆ ಅಧ್ಯಕ್ಷ ಗಣೇಶ, ಗ್ರಾ.ಪಂ.ಸದಸ್ಯೆ ಬಬಿತಾ,  ಸಂಪನ್ಮೂಲ ವ್ಯಕ್ತಿ ನರೇಂದ್ರ ಕುಮಾರ್‌ ಕೋಟ, ಸಮಗ್ರ ಗಿರಿಜನ ಯೋಜನೆಯ ಇಲಾಖಾ ಅಧಿಕಾರಿ ಉಪಸ್ಥಿತರಿದ್ದರು.

ಸರಸ್ವತಿ ಪುತ್ರನ್‌ ಸ್ವಾಗತಿಸಿ, ಕೊರಗ ಸಂಘಟನೆಯ ಗಣೇಶ ಬಾರಕೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ  ಗಣೇಶ ಕಾರ್ಯ ಕ್ರಮ ನಿರ್ವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next