Advertisement

ರಸಪ್ರಶ್ನೆ ವಿಜೇತರಿಗೆ ಬಹುಮಾನ ವಿತರಣೆ

12:22 PM Dec 12, 2021 | Team Udayavani |

ಆಳಂದ: ತಾಲೂಕಿನ ನಿಂಗದಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ತಾಲೂಕು ಕರ್ನಾಡು ವಿಜಯ ಸೇನೆಯಿಂದ 80 ಊಟದ ತಟ್ಟೆ ಹಾಗೂ ರಸಪ್ರಶ್ನೆ ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.

Advertisement

ರಸ ಪ್ರಶ್ನೆಯಲ್ಲಿ ಪಾಲ್ಗೊಂಡ 20 ತಂಡಗಳಲ್ಲಿ ಪ್ರಥಮ, ದ್ವಿತೀಯ ಬಹುಮಾನವಾಗಿ ನೋಟಬುಕ್‌ ಮತ್ತು ಪೇನ್‌ ನೀಡಲಾಯಿತು. ಊಟದ ತಟ್ಟೆ ಮತ್ತು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದ ಸೇನೆಯ ತಾಲೂಕು ಅಧ್ಯಕ್ಷ ಗುರು ಬಂಗರಗಿ ಮಾತನಾಡಿ, ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ವಿಜಯ ಸೇನೆಯಿಂದ ತಟ್ಟೆಗಳನ್ನು ನೀಡಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ಜ್ಞಾನಾರ್ಜನೆಗಾಗಿ ರಸಪ್ರಶ್ನೆ ಸ್ಪರ್ಧೆ ಕೈಗೊಂಡು ವಿಜೇತರಿಗೆ ಬಹುಮಾನ ನೀಡಲಾಗಿದೆ ಎಂದು ಹೇಳಿದರು.

ಮುಖ್ಯ ಶಿಕ್ಷಕ ವೀರಭದ್ರಯ್ಯ ಸ್ವಾಮಿ ಸ್ವಾಗತಿಸಿ, ವಿಜಯ ಸೇನೆ ಕಾರ್ಯಕರ್ತರಿಗೆ ಕೃತಜ್ಞತೆ ಅರ್ಪಿಸಿದರು.ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ನಾಗೇಶ ರಾಂಪೂರೆ, ಗ್ರಾಮದ ಮಹೇಶ ನಿಂಬಾಳೆ, ಸಂತೋಷ ಹಂಚನಾಳೆ, ಮಲ್ಲು ಜಕಾಪೂರೆ, ಅನಿಲ, ಪ್ರಕಾಶ, ವಲಯ ಘಟಕದ ಅಧ್ಯಕ್ಷ ಚಂದ್ರಕಾಂತ ಪಾಟೀಲ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಸಾಗರ ಪಾಟೀಲ, ನಿಂಗದಳಿ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ಹಾಗೂ ಸೇನೆಯ ಇನ್ನಿತರ ಪದಾಧಿ ಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next