Advertisement

ಜಗಳೂರು: ಅವ್ಯವಹಾರದ ಬಗ್ಗೆ ದೂರು ನೀಡಿದ್ದ ಕನ್ನಡ ಸಂಘಟನೆಯ ಅಧ್ಯಕ್ಷನ ಭೀಕರ ಹತ್ಯೆ

12:27 PM Jan 08, 2023 | Team Udayavani |

ದಾವಣಗೆರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅವ್ಯವಹಾರ ನಡೆದಿದೆ ಎಂದು ದೂರು ಸಲ್ಲಿಸಿದ್ದ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷರೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ನಡೆದಿದೆ.

Advertisement

ಕನ್ನಡ ಪರ ಸಂಘಟನೆ ತಾಲೂಕು ಅಧ್ಯಕ್ಷ ರಾಮಕೃಷ್ಣ (30) ಕೊಲೆಯಾದವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್, ಪ್ರಶಾಂತ ಎಂಬುವರನ್ನು ಬಂಧಿಸಲಾಗಿದೆ.

ಶನಿವಾರ ರಾತ್ರಿ ಹೊಸಕೆರೆ ಡಾಬಾದಲ್ಲಿ ರಾಮಕೃಷ್ಣ ಮತ್ತು ಇತರರು ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಬೇರೆ ವಿಚಾರ ಪ್ರಸ್ತಾಪಿಸಿ, ಮಾತಿಗೆ ಮಾತು ಬೆಳೆಸಿದ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ:ಸೂರ್ಯ ಬ್ಯಾಟಿಂಗ್ ಅಬ್ಬರ: ತುಳುನಾಡ ಅಳಿಯನಿಗೆ ಕೆಎಲ್ ರಾಹುಲ್ ಪ್ರಶಂಸೆ

ಜಗಳೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ತಾಲೂಧ್ಯಕ್ಷನಾಗಿದ್ದ ಗೌರಿಪುರ ಮೂಲದ ರಾಮಕೃಷ್ಣ ಇತ್ತೀಚಿಗೆ ಗ್ರಾಮ ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಅದೇ ದ್ವೇಷದಿಂದ ರಾಮಕೃಷ್ಣ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

Advertisement

ಸ್ಥಳಕ್ಕೆ ಎಸ್ಪಿ ರಿಷ್ಯಂತ್‌ ಭೇಟಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next