Advertisement

Pak ಪರ ಘೋಷಣೆ: ಬಂಧಿತ ನಾಶಿಪುಡಿ ಬ್ಯಾಡಗಿ ಮೆಣಸಿನಕಾಯಿ ವರ್ತಕ

11:18 PM Mar 04, 2024 | Team Udayavani |

ಹಾವೇರಿ: ವಿಧಾನಸೌಧದಲ್ಲಿ ಪಾಕಿಸ್ಥಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಆರೋಪದ ಮೇಲೆ ಬ್ಯಾಡಗಿಯ ಮೆಣಸಿನಕಾಯಿ ವರ್ತಕ ಮಹ್ಮದ್‌ಶಫಿ ನಾಶಿಪುಡಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.

Advertisement

ಬ್ಯಾಡಗಿಯಲ್ಲಿ ಕಾಂಗ್ರೆಸ್ ಮುಖಂಡನಾಗಿರುವ ನಾಶಿಪುಡಿ, ತನ್ನ ವ್ಯಾಪಾರದೊಂದಿಗೆ ರಾಜಕಾರಣದಲ್ಲೂ ಸಕ್ರಿಯನಾಗಿದ್ದ. ರಾಜ್ಯಸಭೆ ಚುನಾವಣಾ ಫಲಿತಾಂಶದ ಬಳಿಕ ನಡೆದ ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ನಾಶಿಪುಡಿ ಪಾಕಿಸ್ಥಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಆರೋಪ ಕೇಳಿ ಬಂದಿತ್ತು. ಎಫ್‌ಎಸ್‌ಎಲ್ ವರದಿಯಲ್ಲಿ ಬರುವ ಮುನ್ನ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮೆಣಸಿನಕಾಯಿ ವರ್ತಕನಾಗಿರುವ ಈತನ ಕುರಿತು ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಈ ಹೇಳಿಕೆ ಹಿಂದಿನ ಸತ್ಯಾಸತ್ತತೆ ದೇಶದ ಜನರಿಗೆ ಗೊತ್ತಾಗಬೇಕು. ವಿಶ್ವಪ್ರಸಿದ್ಧ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ವರ್ತಕನಾಗಿದ್ದ ಈತನು ಮಾಡಿದ ತಪ್ಪಿನಿಂದ ಮೆಣಸಿನಕಾಯಿ ಮಾರುಕಟ್ಟೆ ಹೆಸರಿಗೆ ಕಳಂಕ ಬಂದಿದೆ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next