Advertisement

ಪಾಕಿಸ್ತಾನ ಪರ ಪೋಸ್ಟ್‌: ಮುಧೋಳ ಬಂದ್‌ ಯಶಸ್ವಿ

12:49 AM Feb 20, 2019 | |

ಬಾಗಲಕೋಟೆ: ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನ ಪರ ಪೋಸ್ಟ್‌ ಹಾಕಿದ ಮುಧೋಳ ಯುವಕನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಂಗಳವಾರ ಮುಧೋಳ ಬಂದ್‌ ಆಚರಿಸಲಾಯಿತು.

Advertisement

ಮುಧೋಳದಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿ, ಶಿವಾಜಿ ವೃತ್ತದ ಬಳಿ ಹೆದ್ದಾರಿ ತಡೆದು ಯುವಕನ ವಿರುದ್ಧ  ಆಕ್ರೋಶ ವ್ಯಕ್ತಪಡಿಸಿದರು. ಫೇಸ್‌ಬುಕ್‌ ನಲ್ಲಿ ಪಾಕಿಸ್ತಾನದ ಪರ ಪೋಸ್ಟ್‌ ಹಾಕಿದ್ದ ಯುವಕ ನಾಪತ್ತೆಯಾಗಿದ್ದು, ಆತನ ವಿರುದಟಛಿ ದೇಶದ್ರೋಹದ ಪ್ರಕರಣ ದಾಖಲಿಸಿಲ್ಲ. ಬದಲಾಗಿ ಐಪಿಸಿ ಸೆಕ್ಟನ್‌ 295 (ಹಿಂದೂ ಧರ್ಮಕ್ಕೆ ಅವಮಾನ) ಅಡಿ ಪ್ರಕರಣ ದಾಖಲಿಸಿದ್ದಾರೆ. ಇಂತಹ ದೇಶದ್ರೋಹಿಗಳಿಗೆ ಮೊದಲು ಕಠಿಣ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಶಿವಾಜಿ ವೃತ್ತದಲ್ಲಿ ರಸ್ತೆತಡೆ ನಡೆಸುವ ವೇಳೆ ಪೊಲೀಸರು ಮತ್ತು ಹಿಂದೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು. ಬಂದ್‌ ವೇಳೆ ನಡೆದ ಪ್ರತಿಭಟನೆಯಲ್ಲಿ ಹಿಂದೂ-ಮುಸ್ಲಿಮರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next