Advertisement

Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ

02:27 PM Sep 18, 2024 | Vishnudas Patil |

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರವಾದ ಫ್ಲೆಕ್ಸ್ ಹಾಕಲಾಗಿರುವ ಕುರಿತು ಬಿಜೆಪಿ ಶಾಸಕ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಬುಧವಾರ(ಸೆ18 ) ಒತ್ತಾಯಿಸಿದ್ದಾರೆ.

Advertisement

ಹಿಂದೂ ಮತ್ತು ಮುಸ್ಲಿಂ ಎರಡೂ ಧರ್ಮಗಳ ಧಾರ್ಮಿಕ ಸೌಹಾರ್ದತೆಗೆ ಖ್ಯಾತಿಯಾಗಿರುವ ಸ್ಥಳ ಹಣಗೆರೆಕಟ್ಟೆಯಲ್ಲಿ ಮಂಗಳಾವರ ಪ್ಯಾಲೆಸ್ತೀನ್ ಪರವಾದ ಫ್ಲೆಕ್ಸ್ ಕಟ್ಟಲಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಮುಜರಾಯಿ ಇಲಾಖೆ ಆಡಳಿತ ಜಾಗದಲ್ಲಿ ಫ್ಲೆಕ್ಸ್ ಹಾಕಿರುವ ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದು, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next