Advertisement

ಇಂದು ಪಿ.ಚಿದಂಬರಂ ವಿಚಾರಣೆ

09:32 AM Nov 23, 2019 | Team Udayavani |

ಹೊಸದಿಲ್ಲಿ: ಐಎನ್‌ಎಕ್ಸ್‌ ಮಾಧ್ಯಮ ಲಂಚ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂರನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯಕ್ಕೆ ನ.22 ಮತ್ತು 23ರಂದು ಅನುಮತಿ ನೀಡಲಾಗಿದೆ. ಈ ಬಗ್ಗೆ ಗುರುವಾರ ವಿಶೇಷ ಕೋರ್ಟ್‌ ನ್ಯಾಯಾಧೀಶ ಅಜಯ ಕುಮಾರ್‌ ಕುಹರ್‌ ಆದೇಶ ಹೊರಡಿಸಿದ್ದಾರೆ.

Advertisement

ಕಾಂಗ್ರೆಸ್‌ನ ಹಿರಿಯ ನಾಯಕ ನ.27ರವರೆಗೆ ತಿಹಾರ್‌ ಜೈಲಿನಲ್ಲಿ ನ್ಯಾಯಾಂಗ ಕಸ್ಟಡಿಯಲ್ಲಿ ಇರಲಿದ್ದಾರೆ. ಆ.21ರಂದು ಸಿಬಿಐ ಚಿದು ಅವರನ್ನು ಬಂಧಿಸಿತ್ತು. ಆ.16ರಂದು ಇ.ಡಿ ಇದೇ ಪ್ರಕರಣದಲ್ಲಿ ದಸ್ತಗಿರಿ ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next