Advertisement
ಜಿಲ್ಲೆಯಲ್ಲಿ ತೊಗರಿ ಒಂದು ಪ್ರಮುಖ ದ್ವಿದಳಧಾನ್ಯ ಬೆಳೆಯಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 11,878 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಬಿತ್ತನೆಯಾಗಿ ರುವ ತೊಗರಿ ಬೆಳೆಯು ಹೂವು ಬಿಡುವ ಹಂತದಲ್ಲಿದ್ದು, ಹೂ ಬಿಡುವ ಹಂತದಲ್ಲಿ ಸಾಮಾನ್ಯವಾಗಿ ಕಾಯಿ ಕೊರಕ ಹುಳು ಮತ್ತು ಗೂಡುಮಾರು ಹುಳು ಬಾಧೆ ಕಂಡು ಬರುತ್ತದೆ. ಕೀಟನಾಶಕ ಸಿಂಪಡಣೆ, ಬೇವಿನ ಬೀಜದ ಕಷಾಯ, ಸಮಗ್ರ ಕೀಟ ನಿರ್ವಹಣ ಕ್ರಮಗಳನ್ನು ಅನುಸರಿಸುವುದರಿಂದ ಈ ಹುಳುಗಳ ಬಾಧೆಯನ್ನು ಹತೋಟಿಗೆ ತರಬಹುದು ಎಂದು ಹೇಳಿದ್ದಾರೆ.
Related Articles
Advertisement
ಮೊಗ್ಗ, ಹೂವಿನ ಹಂತದಲ್ಲೇ ಹತೋಟಿಗೆ ತನ್ನಿ: ತೊಗರಿ ಬೆಳೆಯು ಮೊಗ್ಗು ಮತ್ತು ಹೂವಿನ ಹಂತದಲ್ಲಿದ್ದಾಗಲೇ ಎಕರೆಗೆ 200 ಎಲ್.ಇ ನಂಜು ರೋಗಾಣು (ಎಚ್ಎ.ಎನ್ .ಪಿ.ವಿ)ಗಳನ್ನು 400 ಲೀಟರ್ ನೀರಿನಲ್ಲಿ ಸೇರಿಸಿ ಶೇ.0.1 ಟಿ-ಪಾಲ್ ಮತ್ತು ಶೇ.0.5ರ ಬೆಲ್ಲದ ಪಾಕವನ್ನು ಬೆರೆಸಿ ಸಾಯಂಕಾಲದ ಸಮಯದಲ್ಲಿ ಸಿಂಪಡಿಸುವುದರಿಂದ ಮರಿ ಹುಳುಗಳಿಗೆ ನಂಜಾಣು ರೋಗ ತಗಲಿ ತಲೆ ಕೆಳಗಾಗಿ ನೇತಾಡುತ್ತಾ ಸಾಯುತ್ತವೆ. ಎಚ್ಎ.ಎನ್.ಪಿ.ವಿ. ಸಿಂಪಡಿಸಿದ 10-15 ದಿನಗಳ ನಂತರ ಶೇ.4ರ ಬೇವಿನ ಬೀಜದ ಕಷಾಯವನ್ನು ಸಿಂಪರಣೆ ಮಾಡುವುದು.
ಈ ಕಷಾಯ ತಯಾರಿಸಲು 32 ಕಿ.ಗ್ರಾಂ ಬೇವಿನ ಬೀಜದ ಪುಡಿಯನ್ನು (ಸಿಪ್ಪೆಸಹಿತ) ಸುಮಾರು 50 ಲೀಟರ್ ನೀರಿನಲ್ಲಿ ಒಂದು ರಾತ್ರಿ ನೆನೆಸಿ, ಎರಡು ಮೂರು ಬಾರಿ ಸೋಸಿ, ಇದರಿಂದ ಬಂದ ದ್ರಾವಣಕ್ಕೆ 400 ಗ್ರಾಂ ಸಾಬೂನಿನ ಪುಡಿ ಸೇರಿಸಿ ನಂತರ 350 ಲೀಟರ್ ನೀರಿಗೆ ಈ 50 ಲೀಟರ್ ಬೇವಿನ ಬೀಜದ ದ್ರಾವಣ ಸೇರಿಸಿದರೆ ಒಟ್ಟು 400 ಲೀಟರ್ ಬೇವಿನ ಬೀಜದ ಕಷಾಯ ಸಿದ್ಧವಾಗುತ್ತದೆ. ಈ 400 ಲೀಟರ್ ದ್ರಾವಣ ಒಂದು ಎಕರೆಗೆ ಸಿಂಪಡಿಸಲು ಸಾಕಾಗುತ್ತದೆ
ಕೀಟನಾಶಕ ಬಳಕೆ –
ಬೇವಿನ ಬೀಜದ ಕಷಾಯ ಸಿಂಪಡಿಸಿದ 10-15 ದಿನಗಳ ನಂತರ, ಅವಶ್ಯಕತೆ ಕಂಡುಬಂದರೆ ಕಾಯಿಕೊರಕ ಹುಳುವಿನ ಹತೋಟಿಗೆ ಕೀಟನಾಶಕಗಳನ್ನು ಸಿಂಪ ಡಿಸಬೇಕು. ಇಂಡಾಕ್ಸಾಕಾರ್ಬ್ 14.5 ಎಸ್.ಸಿ 0.5 ಮಿ.ಲೀ ಪ್ರತಿ ಲೀಟರ್ ನೀರಿಗೆ ಅಥವಾ ಕ್ಲೋರೆ³„ರಿಫಾಸ್ 20 ಇ.ಸಿ 2 ಮಿ.ಲೀ ಪ್ರತಿ ಲೀಟರ್ ನೀರಿಗೆ ಅಥವಾ ಎಮಾಮೆಕ್ಟಿನ್ ಬೆನ್ ಜೋಯೆಟ್ 0.3 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಸಕಾಲಕ್ಕೆ ಸಮಗ್ರ ಕೀಟ ನಿರ್ವಹಣೆ ಕೈಗೊಳ್ಳುವುದ ರಿಂದ ರೋಗ ಹತೋಟಿಗೆ ತರಬಹು ದಾಗಿದ್ದು, ಇಳುವರಿಯೂ ಹೆಚ್ಚಲಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ತಿಳಿಸಿದ್ದಾರೆ.