Advertisement

ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಿದ ಡಿ.ಕೆ.ಶಿ

03:13 PM Dec 07, 2020 | Adarsha |

ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು.‌

Advertisement

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ ಹಾಜರಿದ್ದರು.

ಇದನ್ನೂ ಓದಿ:ಭಾರತದ ಕೃಷಿ ಕಾಯ್ದೆ ವಿರೋಧಿಸಿ ಅಮೆರಿಕಾದಲ್ಲಿ ಸಿಕ್ ಸಮುದಾಯದಿಂದ ಪ್ರತಿಭಟನೆ

ಕೇಂದ್ರ ಸಚಿವರಾಗಿದ್ದ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಚುನಾವಣೆ ದಿನಾಂಕ ನಿಗದಿಯಾಗಿಲ್ಲವಾದರೂ ಪಕ್ಷಗಳು ತಯಾರಿಯಲ್ಲಿ ತೊಡಗಿದೆ.

Advertisement

Udayavani is now on Telegram. Click here to join our channel and stay updated with the latest news.

Next