Advertisement

ಮೃತ ಫೈಟರ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ನಿರ್ಮಾಪಕ ಗುರು ದೇಶಪಾಂಡೆ

09:03 PM Aug 10, 2021 | Team Udayavani |

ಬೆಂಗಳೂರು : ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ನಡೆದ ಅವಘಡದಲ್ಲಿ ಮೃತ ಪಟ್ಟ ಫೈಟರ್ ವಿವೇಕ್ ಅವರ ಕುಟುಂಬಕ್ಕೆ ನಿರ್ಮಾಪಕ ಗುರು ದೇಶಪಾಂಡೆ ಅವರು 10 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.

Advertisement

ಘಟನೆ ಬಳಿಕ ನಾಪತ್ತೆಯಾಗಿರುವ ಗುರು ದೇಶಪಾಂಡೆ, ಮೃತ ವಿವೇಕ್ ಅವರ ಚಿಕ್ಕಪ್ಪ ಗೋಪಿ ಅವರನ್ನು ಮೊಬೈಲ್‌ ಮೂಲಕ ಸಂಪರ್ಕಿಸಿ ಪರಿಹಾರವಾಗಿ 10 ಲಕ್ಷ ಹಣ ನೀಡುವುದಾಗಿ ಹೇಳಿದ್ದಾರಂತೆ.

ಈ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಗೋಪಿ, ”ಫೈಟ್ ಯೂನಿಯನ್ ನವರು ಕರೆ ಮಾಡಿ ಹತ್ತು ಲಕ್ಷ ಪರಿಹಾರ ಸಿಗುತ್ತದೆ. ಈಗ ಏನು ಕೆಲಸ ಆಗಬೇಕು ಅದು ನೋಡಿ. ಘಟನೆಯಲ್ಲಿ ಯಾರದ್ದೂ ತಪ್ಪಿಲ್ಲ, ಗುರು ಅವರದ್ದೂ ತಪ್ಪಿಲ್ಲ. ಈಗಾಗಲೇ ಪ್ರಕರಣ ದಾಖಲಾಗಿದೆ ತಪ್ಪು ಯಾರದ್ದಿರುತ್ತದೆಯೋ ಅವರಿಗೆ ಶಿಕ್ಷೆ ಆಗಲಿದೆ” ಎಂದು ಹೇಳಿದ್ದಾರೆ” ಎಂದಿದ್ದಾರೆ.

ಇನ್ನು ನಟ ಅಜಯ್ ರಾವ್, ರಚಿತಾ ರಾಮ್ ನಟಿಸುತ್ತಿರುವ ‘ಲವ್ ಯು ರಚ್ಚು’ ಸಿನಿಮಾದ ಚಿತ್ರೀಕರಣದ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಸಾವನ್ನಪ್ಪಿದ್ದು ಒಬ್ಬ ವ್ಯಕ್ತಿ ಗಾಯಾಳುವಾಗಿದ್ದಾನೆ.

ಘಟನೆ ಕುರಿತು ದೂರು ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು, ಸಾಹಸ ನಿರ್ದೇಶಕ , ಸಿನಿಮಾ ನಿರ್ದೇಶ ಹಾಗೂ ಕ್ರೈನ್ ಡ್ರೈವರ್ ನನ್ನು ಬಂಧಿಸಿದ್ದಾರೆ. ನಿರ್ಮಾಪಕ ಗುರು ದೇಶಪಾಂಡೆ ನಾಪತ್ತೆಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next