Advertisement

ಎಸ್‌ಸಿಪಿ, ಟಿಎಸ್‌ಪಿಯಲ್ಲಿ ಪ್ರಗತಿ

10:00 AM Jul 02, 2019 | Suhan S |

ಬಳ್ಳಾರಿ: ಜಿಲ್ಲೆಯ ಪ್ರತಿಯೊಂದು ಇಲಾಖೆಯಲ್ಲಿ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಅರ್ಥಿಕ ಸಂಪನ್ಮೂಲ ಹಂಚಿಕೆ ಹಾಗೂ ಬಳಕೆಯಲ್ಲಿ ಎರಡ್ಮೂರು ಇಲಾಖೆ ಹೊರತುಪಡಿಸಿ ಇನ್ನುಳಿದಂತೆ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್ ಹೇಳಿದರು.

Advertisement

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸಿವುದು, ಆರ್ಥಿಕ ಸಂಪೂನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರನ್ವಯ ರಚಿಸಲಾದ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಹಾಗೂ ಪ್ರಗತಿ ವರದಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಮಟ್ಟದಲ್ಲಿ ಶೇ. 100ರಷ್ಟು ಪ್ರಗತಿ ಸಾಧಿಸಬೇಕು ಎಂಬ ಒತ್ತಡವಿದೆ. ಹಾಗಾಗೀ ಜಿಲ್ಲೆಯಲ್ಲಿ ಬಿಡುಗಡೆಯಾದ ಅನುದಾನವನ್ನು ಸರಿಯಾದ ರೀತಿಯಲ್ಲಿ ಅರ್ಹರಿಗೆ ಖರ್ಚು ಮಾಡಬೇಕು. ಖರ್ಚು ಮಾಡಿದ ಹಣದ ಮಾಹಿತಿಯ ಅಂಕಿ ಅಂಶಗಳನ್ನು ನಮೂದಿಸಬೇಕು. ಅಂಕಿ ಅಂಶಗಳು ಸರಿಯಾಗಿ ಇಲ್ಲವಾದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. 2018-19ನೇ ಸಾಲಿನ ಪಿಎಂವೈಜಿಪಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಸಂಬಂಧಿಸಿದ ಫಲಾನುಭವಿಗಳಿಗೆ ಸಾಲ ಬಿಡುಗಡೆ ಆಗಿರುವುದಿಲ್ಲ. ಬ್ಯಾಂಕ್‌ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿ ಅವರ ಜೊತೆಗೆ ಸಭೆ ನಡೆಸಬೇಕು. ಈ ಯೋಜನೆಯಲ್ಲಿ 3ರ ಅನುಪಾತದಲ್ಲಿ 1ನ್ನು ಆಯ್ಕೆ ಮಾಡಬೇಕು ಎಂಬ ನಿಯಮವಿದೆ, ಆದರೆ ಬ್ಯಾಂಕಿನವರು ಇದುವರೆಗೆ ಯಾರನ್ನು ಆಯ್ಕೆ ಮಾಡಿಲ್ಲ, ಆಯ್ಕೆಯಾದ ಫಲಾನುಭವಿಗಳಿಗೆ ಸಾಲ ನೀಡಿರುವುದಿಲ್ಲ. ಈ ಕುರಿತು ಅಧಿಕಾರಿಗಳು ಬ್ಯಾಂಕ್‌ ಅಧಿಕಾರಿಗಳಿಂದ ಮಾಹಿತಿ ಪಡೆದು ಗುರಿ ತಲುಪಲು ಪ್ರಯತ್ನಿಸಬೇಕು ಎಂದು ಸೂಚನೆ ನೀಡಿದರು. ಕೆಲವೊಂದು ಇಲಾಖೆಗಳು ಸರಿಯಾದ ಅಂಕಿ ಅಂಶಗಳು ಯೋಜನೆಯ ರೂಪುರೇಷೆ, ಕ್ರಿಯಾಯೋಜನೆ ಬಗ್ಗೆ ಮಾಹಿತಿ ನೀಡದಿರುವುದು ಗಮನಿಸಲಾಗಿದ್ದು, ಇದಕ್ಕಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮುಂದಿನ ಸಭೆಗೆ ಸಮಗ್ರ ಮಾಹಿತಿಯೊಂದಿಗೆ ಆಗಮಿಸಿ ವರದಿ ಸಲ್ಲಿಸಬೇಕು ಎಂದರು.

ಜಿಪಂ ಸಿಇಒ ಕೆ.ನಿತೀಶ್‌, ಅಪರ ಡಿಸಿ ಎಂ.ಸತೀಶ್‌ ಕುಮಾರ್‌, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಪ್ಪ, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next