Advertisement

ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ!

05:25 PM Dec 03, 2020 | sudhir |

ಶಿವಮೊಗ್ಗ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನಡೆದ ಗಲಾಟೆ ಪ್ರಕರಣ ವಿಸ್ತಾರಗೊಳ್ಳುತ್ತಿದ್ದಂತೆ ಪರಿಸ್ಥಿತಿ ತಿಳಿಗೊಳಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.

Advertisement

ಇಂದಿನಿಂದ ಶನಿವಾರ ಬೆಳಗ್ಗೆ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಆದೇಶದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪುಗೂಡದಂತೆ ಸೂಚನೆ ನೀಡಲಾಗಿದ್ದು. ಆದೇಶ ಉಲ್ಲಘಿಂಸಿದವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ.

ಈವರೆಗಿನ ಗಲಾಟೆಯಲ್ಲಿ ಒಟ್ಟು ಹನ್ನೊಂದು ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ನಾಲ್ಕು ಕಾರು ಹಾಗೂ ಒಂದು ಆಟೋ ರಿಕ್ಷಾ ಜಖಂಗೊಂಡಿದೆ.

ಪೂರ್ವ ವಲಯ ಐಜಿಪಿ ಎಸ್.ರವಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಪರಿಸ್ಥಿತಿಯನ್ನು ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next