Advertisement

ಎತ್ತಿನ ಭುಜ: ಅಧಿಕಾರಿಗಳ ಖಡಕ್ ನಿರ್ಧಾರ; ಮ್ಯಾರಥಾನ್ ರದ್ದು

02:59 PM Nov 27, 2021 | Team Udayavani |

ಚಿಕ್ಕಮಗಳೂರು: ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯರಿಂದ ವ್ಯಕ್ತವಾದ ವಿರೋಧದ ಹಿನ್ನೆಲೆಯಲ್ಲಿ ಎತ್ತಿನಭುಜ ಎತ್ತಿನ ಭುಜ: ಅಧಿಕಾರಿಗಳ ಖಡಕ್ ನಿರ್ಧಾರ; ಮ್ಯಾರಥಾನ್ ರದ್ದುಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಇಂದು ನಡೆಯಲಿದ್ದ ಮ್ಯಾರಥಾನ್ ರದ್ದಾಗಿದೆ.

Advertisement

ಅರಣ್ಯ ಪ್ರದೇಶ ಹೊರತುಪಡಿಸಿ ಉಳಿದ ಜಾಗದಲ್ಲಿ ಪೂರ್ವನಿಗದಿಯಂತೆ ಮ್ಯಾರಥಾನ್ ಓಟ ನಡೆದಿದ್ದು, ಇದಕ್ಕೆ ಅನುಮತಿ ನೀಡಿದ ಕ್ರಮವು ಟೀಕೆಗೆ ಗುರಿಯಾಗಿದೆ.

ಎತ್ತಿನಭುಜ ವ್ಯಾಪ್ತಿಯಲ್ಲಿ ಮ್ಯಾರಥನ್ ನಡೆಯುತ್ತಿರುವ ಬಗ್ಗೆ ಉದಯವಾಣಿ ವೆಬ್ ಸುದ್ದಿ ಮಾಡಿ ಗಮನ ಸೆಳೆದಿದ್ದು ತಕ್ಷಣ ಪರಿಸರ ಪ್ರೇಮಿಗಳು ಅರಣ್ಯ ಇಲಾಖೆ ಗಮನಕ್ಕೆ ತಂದ ಫಲವಾಗಿ ಅರಣ್ಯ ಪ್ರದೇಶದಲ್ಲಿ ಮ್ಯಾರಥಾನ್ ಓಟಕ್ಕೆ ಕಡಿವಾಣ ಬಿದ್ದಿದೆ.

ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಎತ್ತಿನ ಭುಜ ಪ್ರದೇಶ ಅತ್ಯಂತ ನೈಸರ್ಗಿಕ ಮಹತ್ವ ಇರುವ ಪ್ರದೇಶ. ಇಲ್ಲಿ ಪ್ರವಾಸಿಗರಿಗೆ ಯಾವುದೇ ಮಾರ್ಗಸೂಚಿ ಇಲ್ಲದೆ ಮೋಜು ಮಸ್ತಿ, ಪಾರ್ಟಿ, ಇತ್ಯಾದಿ ಅಕ್ರಮ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತಿತ್ತು.

ಇದನ್ನೂ ಓದಿ:ಕೃಷಿ ಕಾಯ್ದೆ ರದ್ದಾಗುತ್ತೆ…ರೈತರು ಪ್ರತಿಭಟನೆ ಕೈಬಿಟ್ಟು, ಮನೆಗೆ ತೆರಳಬೇಕು: ಸಚಿವ ತೋಮರ್

Advertisement

ಇತ್ತೀಚೆಗೆ ಗುಡ್ಡ ಗಾಡು ಓಟ ಕಾರ್ಯಕ್ರಮವನ್ನು ಖಾಸಗಿ ಸಂಸ್ಥೆ ಆಯೋಜಿಸಿತ್ತು. ಇದಕ್ಕೆ ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ನಿಯೋಜನೆ ಮಾಡಿ ಗುಡ್ಡ ಗಾಡು ಓಟ ಅರಣ್ಯ ಪ್ರದೇಶದಲ್ಲಿ ಸಾಗದಂತೆ ತಡೆದಿದ್ದಾರೆ.

ಎತ್ತಿನ ಭುಜಕ್ಕೆ ಪ್ರವೇಶ ಮಾಡದಂತೆ ಮುಂದಿನ ಆದೇಶದವರೆಗೆ ನಿಷೇಧ ಹೇರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿ ಪ್ರದೇಶ ದ್ವಾರದಲ್ಲಿ ತಂತಿ ಬೇಲಿ ಹಾಕಿ ಮುಚ್ಚಲಾಗಿದೆ.

ಎತ್ತಿನ ಭುಜ ಪ್ರದೇಶ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟಿದ್ದು   ಸಾಕಷ್ಟು ಆನೆಗಳು ಇವೆ. ಪ್ರವಾಸಿಗರ ಚಟುವಟಿಕೆಗಳಿಂದ ಆನೆಗಳಿಗೆ ತೊಂದರೆ ಆಗುತ್ತಿದ್ದು, ಅರಣ್ಯ ಇಲಾಖೆ ತಂತಿ ಬೇಲಿ ನಿರ್ಮಿಸಿ ಎತ್ತಿನ ಭುಜಕ್ಕೆ ಪ್ರವೇಶ ನಿಷೇಧ ಮಾಡಿರುವುದನ್ನು ಪರಿಸರ ಪ್ರಿಯರು ಸ್ವಾಗತಿಸಿ, ಇಲ್ಲಿ ಶಾಶ್ವತವಾಗಿ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next