Advertisement

ಬೆಳ್ತಂಗಡಿ, ಸುಳ್ಯದಲ್ಲಿ ಯೋಜನ ಪ್ರಾಧಿಕಾರ: ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ: ಕೋಟ

10:11 PM Mar 29, 2022 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ನಗರ ಯೋಜನ ಪ್ರಾಧಿಕಾರವಾಗಿ ರಚಿಸುವ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

Advertisement

ಮಂಗಳವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಕೆ. ಹರೀಶ್‌ ಕುಮಾರ್‌ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಸ್ತುತ ಸುಳ್ಯ ಪಟ್ಟಣಕ್ಕೆ ಸ್ಥಳೀಯ ಯೋಜನ ಪ್ರದೇಶ ಘೋಷಿಸಿ, ಪಟ್ಟಣ ಪಂಚಾಯತ್‌ ಯೋಜನ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ನಗರ ಯೋಜನ ಪ್ರಾಧಿಕಾರ ರಚನೆಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಪಂಜಾಬ್‌: ಅಧಿಕಾರಿಗಳನ್ನು ಒತ್ತೆಯಾಳು ಮಾಡಿಕೊಂಡ ರೈತರು

ನಗರ ಯೋಜನ ಪ್ರಾಧಿಕಾರ ಘೋಷಿಸಲು ಸಾಮಾನ್ಯವಾಗಿ ಆಯಾ ಪಟ್ಟಣಗಳ ಜನಸಂಖ್ಯೆ, ಸ್ಥಳೀಯ ಆರ್ಥಿಕ ಸ್ಥಿತಿ, ಜನಸಂಖ್ಯೆಯ ದಶಕದ ಬೆಳವಣಿಗೆ, ಯಾವ ಮಟ್ಟದ ಸ್ಥಳೀಯ ಸಂಸ್ಥೆ, ತಾಲೂಕು ಕೇಂದ್ರದ ಪಟ್ಟಣ ಅಥವಾ ಜಿಲ್ಲಾ ಕೇಂದ್ರ ಪಟ್ಟಣ ಎನ್ನುವ ಅಂಶಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next