Advertisement

Panambur ಬೇಡಿಕೆ ಈಡೇರಿಕೆ ಭರವಸೆ: ಲಾರಿ ಮುಷ್ಕರ ಮುಂದೂಡಿಕೆ

10:52 PM Sep 25, 2023 | Team Udayavani |

ಪಣಂಬೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರ ಸ್ಪಂದನೆ ಹಾಗೂ ಪೊಲೀಸ್‌ ಇಲಾಖೆಯು ಸಂಬಂಧಪಟ್ಟ ಇಲಾಖೆಯ ಆಧಿಕಾರಿಗಳ ತುರ್ತು ಸಭೆ ನಡೆಸಿ ಬೇಡಿಕೆ ಈಡೇರಿಸುವ ಕುರಿತು ಮಾತುಕತೆ ನಡೆಸಿದ ಹಿನ್ನಲೆಯಲ್ಲಿ ದ.ಕ. ಟ್ರಕ್‌ ಓನರ್ಸ್‌ ಅಸೋಸಿಯೇಶನ್‌ ವಿವಿಧ ಬೇಡಿಕೆ ಮುಂದಿಟ್ಟು ಸೋಮವಾರ ಕರೆ ನೀಡಿದ ಲಾರಿ ಮುಷ್ಕರವನ್ನು ಮುಂದೂಡಲಾಗಿದೆ.

Advertisement

ನವಮಂಗಳೂರು ಕೋಲ್‌ ಟರ್ಮಿನಲ್‌ ದಿಂದ ದಿನಂ ಪ್ರತಿ ಸಾವಿರಾರು ಮೆಟ್ರಿಕ್‌ ಟನ್‌ ಕಲ್ಲಿದ್ದಲು ಸಾಗಾಟ ಮಾಡಲಾಗುತ್ತಿದ್ದು ಲಾರಿ ಮಾಲಕರಿಗೆ ಸರಕಾರ ನಿಗದಿ ಪಡಿಸಿದ ಕನಿಷ್ಟ ಬಾಡಿಗೆ ದರವನ್ನು ನೀಡುತ್ತಿಲ್ಲ, ಇದರಿಂದಾಗಿ ಲಾರಿ ಮಾಲಕರು ಸಂಕಷ್ಟದಲ್ಲಿದ್ದು ಈ ಬಗ್ಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಮಂಗಳೂರಿನಲ್ಲಿ ನೀಡಿದ ಮನವಿಗೆ ಸೂಕ್ತವಾಗಿ ಸ್ಪಂದಿಸಿದ್ದು ಸಮಸ್ಯೆ ಬಗೆ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಧ್ಯಕ್ಷ ಸುಶಾಂತ್‌ ಶೆಟ್ಟಿ ಹಾಗೂ ಕಾರ್ಯದರ್ಶಿ ಸುನಿಲ್‌ ಡಿಸೋಜಾ ಅವರು ಸಚಿವರಿಗೆ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next