Advertisement

ಡಿಸಿಯಿಂದ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ

11:26 PM Aug 14, 2019 | Team Udayavani |

ತೆಕ್ಕಟ್ಟೆ: ಕುಂಭಾಸಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರಾ.ಹೆ.66 ಕುಂಭಾಸಿ-ಕೊರವಡಿ ಕರಾವಳಿ ಗ್ರಾಮೀಣ ಸಂಪರ್ಕಕ್ಕಾಗಿ ಸರ್ವಿಸ್‌ ರಸ್ತೆ ನಿರ್ಮಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರಿಗೆ ಸಾರ್ವಜನಿಕರ ಪರವಾಗಿ ಕುಂಭಾಸಿ ಗ್ರಾ.ಪಂ. ವತಿಯಿಂದ ಆ. 14ರಂದು ಮನವಿ ಮಾಡಿದ್ದಾರೆ.

Advertisement

ಈ ಸಂದರ್ಭದಲ್ಲಿ ಕುಂಭಾಸಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶ್ರೀವಾಣಿ ಅಡಿಗ ಮನವಿ ಸಲ್ಲಿಸಿ ಮಾತನಾಡಿ, ಈ ಪರಿಸರದ ಬಸ್‌ ಹಾಗೂ ಆಟೋ ಚಾಲಕರು ರಾ.ಹೆ.66ರಲ್ಲಿ ವಿರುದ್ಧ ದಿಕ್ಕಿನಿಂದ ಸಾಗಬೇಕಾದ ಅನಿವಾರ್ಯತೆ ಇರುವ ಪರಿಣಾಮ ಪೊಲೀಸರು ವೈಜ್ಞಾನಿಕವಾಗಿ ಚಿಂತನೆ ಮಾಡದೆ ಏಕಾಏಕಿ ದಂಡ ವಿಧಿಸುತ್ತಿದ್ದಾರೆ, ಇದರಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ . ಈ ಸಂಬಂಧ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಉದಯ ವಾಣಿಗೆ ಪ್ರತಿಕ್ರಿಯಿಸಿ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳು ತ್ತೇನೆ. ರಾ.ಹೆ. 66ರಲ್ಲಿ ಈಗಾಗಲೇ ಸೃಷ್ಟಿಯಾಗಿರುವ ಅಪಾಯಕಾರಿ ಗುಂಡಿಗಳನ್ನು ಮುಚ್ಚುವಂತೆ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರಾದ ರಾಧಾದಾಸ್‌, ರಾಘವೇಂದ್ರ ಮೊಗವೀರ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next