Advertisement

ಸ್ಥಳೀಯ ಉತ್ಪನ್ನಗಳ ಪ್ರಚಾರ ಮಾಡಿ: ಬಾಲ ಪುರಸ್ಕಾರ ವಿಜೇತರಿಗೆ ಪ್ರಧಾನಿ ಮೋದಿ ಸಲಹೆ

11:49 PM Jan 24, 2022 | Team Udayavani |

ಹೊಸದಿಲ್ಲಿ: ಸ್ಥಳೀಯ ಉತ್ಪನ್ನಗಳ ಬಳಕೆ ಮತ್ತು ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ. ಪ್ರಸಕ್ತ ಸಾಲಿನ “ಪ್ರಧಾನ­ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಗೌರವಕ್ಕೆ ಪಾತ್ರ­ರಾದವರ ಜತೆ ಸೋಮವಾರ ಸಂವಾದ ನಡೆಸಿದಾಗಲೂ ಈ ಅಂಶ ಪ್ರಸ್ತಾಪಿಸಿದ್ದಾರೆ.

Advertisement

ನೇತಾಜಿ ಸುಭಾಶ್ಚಂದ್ರಬೋಸ್‌ ಅವರ ಹಾಲೋಗ್ರಾಂ ಪ್ರತಿಮೆ ಅನಾವರಣ ಪ್ರಸ್ತಾಪಿಸಿದ ಪ್ರಧಾನಿ “ಕರ್ತವ್ಯ ಮತ್ತು ದೇಶವೇ ಮೊದಲು ಎಂಬ ತತ್ವವನ್ನು ನೇತಾಜಿಯಿಂದ ಕಲಿಯ ಬಹುದು. ಅದಕ್ಕಾಗಿ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕಾಗಿದೆ’ ಎಂದರು.

ಸ್ಥಳೀಯವಾಗಿ ಉತ್ಪಾದನೆಗೊಳ್ಳುವ ವಸ್ತುಗಳಿಗೆ ಹೆಚ್ಚಿನ ಪ್ರಚಾರ ಮತ್ತು ಬೆಂಬಲ ನೀಡುವ ನಿಟ್ಟಿನಲ್ಲಿ ಪ್ರಶಸ್ತಿ ಪುರಸ್ಕೃತರು ತಮ್ಮ ತಮ್ಮ ಮನೆಗಳಲ್ಲಿ ಬಳಕೆ ಮಾಡುತ್ತಿರುವ ವಿದೇಶಿ ವಸ್ತುಗಳನ್ನು ಪಟ್ಟಿ ಮಾಡಬೇಕು. ಕೇಂದ್ರದ ಯೋಜನೆಗಳು ಯುವಕರನ್ನು ಕೇಂದ್ರೀಕರಿ­ಸಿಯೇ ಜಾರಿಯಾಗುತ್ತಿದೆ ಎಂದರು. ಜತೆಗೆ ಜಗತ್ತಿನ ಪ್ರಮುಖ ಕಂಪೆನಿಗಳ ಮುಖ್ಯಸ್ಥರು ಭಾರತೀಯರೇ ಆಗಿದ್ದಾರೆ ಎಂದರು.

ಇದನ್ನೂ ಓದಿ:ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಡಿಜಿಟಲ್‌ ಪ್ರಮಾಣ ಪತ್ರ
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ವಿಜೇತರಿಗೆ ಪ್ರಸಕ್ತ ಸಾಲಿನಿಂದ ಡಿಜಿಟಲ್‌ ಪ್ರಮಾಣ ಪತ್ರ ಸಿಗಲಿದೆ. ಬ್ಲಾಕ್‌ಚೈನ್‌ ತಂತ್ರಜ್ಞಾನವನ್ನು ಉಪಯೋಗಿ­ಸಿಕೊಂಡು, ಪ್ರಶಸ್ತಿಯನ್ನು ನೀಡಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next