Advertisement

ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಬಡ್ತಿ

11:31 PM Jan 13, 2020 | Lakshmi GovindaRaj |

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕ್ಷೇತ್ರ ಶಿಕ್ಷಣಾಧಿ ಕಾರಿ ಗಳು, ಉಪನಿರ್ದೇಶಕರು ಹಾಗೂ ಜಂಟಿ ನಿರ್ದೇಶಕರಲ್ಲಿ ಕೆಲವರಿಗೆ ಬಡ್ತಿ ನೀಡಿ, ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Advertisement

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳಿಗೆ ಉಪನಿರ್ದೇಶಕ ಹಾಗೂ ತತ್ಸಮಾನ ವೃಂದದ ಹುದ್ದೆಗೆ ಬಡ್ತಿ ನೀಡಲಾಗಿದೆ. ಉಪನಿರ್ದೇಶಕರು ಹಾಗೂ ತತ್ಸಮಾನ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲವು ಹಿರಿಯ ಅಧಿಕಾರಿಗಳನ್ನು ಜಂಟಿ ನಿರ್ದೇಶಕರ ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಹಾಗೆಯೇ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿಯೂ ಆದೇಶ ಹೊರಡಿಸಿದೆ.

ಅನುಕಂಪದ ಹುದ್ದೆ: ಮೈಸೂರು ವಿಭಾಗದ ಜಂಟಿ ನಿರ್ದೇಶಕರು ಹಾಗೂ ಬೆಂಗಳೂರು ವಿಭಾಗದ ಜಿಲ್ಲಾ ಉಪ ನಿರ್ದೇಶಕರ 7 ಪ್ರಥಮ ದರ್ಜೆ ಸಹಾಯಕ ಹುದ್ದೆ ಭರ್ತಿಗೆ ಅನುಮತಿ ಕೋರಿದ್ದರು. ಇಲಾಖೆಯ ಮತ್ತು ಸರ್ಕಾ ರದ ಷರತ್ತುಗಳಿಗೆ ಅನುಸಾರವಾಗಿ 7 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ಇಲಾಖೆ ಅನುಮತಿ ನೀಡಿದೆ. ವಿದ್ಯಾರ್ಹತೆ, ದಾಖಲಾತಿ, ಸಾಮಾನ್ಯ ನೇಮಕಾತಿ ನಿಯಮಾನುಸಾರ ವಯೋಮಿತಿ ಇವೆಲ್ಲವನ್ನು ಕಡ್ಡಾಯವಾಗಿ ಪಾಲಿಸಿ, ಷರತ್ತುಗಳನ್ವಯ ನೇಮಕಕ್ಕೆ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next