Advertisement

ಆಂಧ್ರ, ತೆಲಂಗಾಣ ಬಿಜೆಪಿ ಪದಾಧಿಕಾರಿಗಳಿಂದ ಪ್ರಚಾರ

12:48 AM Apr 15, 2019 | Team Udayavani |

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯ ಬಿಜೆಪಿ ಪದಾಧಿಕಾರಿಗಳು ಭಾನುವಾರ ಪಕ್ಷದ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಪ್ರಚಾರ ನಡೆಸಿದರು.

Advertisement

ಪದ್ಮನಾಭನಗರ, ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವೆಡೆ ತೆಲುಗು ಭಾಷಿಕರು ಭಾರೀ ಸಂಖ್ಯೆಯಲ್ಲಿದ್ದಾರೆ. ಜತೆಗೆ ಸ್ಥಳೀಯವಾಗಿ ಪ್ರಭಾವಿಗಳೂ ಆಗಿರುವುದರಿಂದ ತೆಲುಗು ಭಾಷಿಕ ನಾಯಕರು, ಮುಖಂಡರನ್ನು ಕರೆಸಿ ಬಿಜೆಪಿ ಪ್ರಚಾರ ನಡೆಸಿತು.

ಆಂಧ್ರ ಪ್ರದೇಶ ಹಾಗೂ ತಮಿಳುನಾಡು ರಾಜ್ಯ ಬಿಜೆಪಿಯ ಕೆಲ ಪದಾಧಿಕಾರಿಗಳು, ನಾನಾ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಭಾನುವಾರ ಪದ್ಮನಾಭನಗರ, ಬೆಂಗಳೂರು ದಕ್ಷಿಣ ಹಾಗೂ ಬೊಮ್ಮನಹಳ್ಳಿಯ ಹಲವೆಡೆ ಪ್ರಚಾರ ನಡೆಸಿದರು.

ಸೋಮವಾರ ಕೂಡ ಕ್ಷೇತ್ರದ ನಾನಾ ಕಡೆ ಪ್ರಚಾರ ನಡೆಸಲಿದ್ದಾರೆ. ಮುಖ್ಯವಾಗಿ ತೆಲುಗು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತ ಯಾಚಿಸಲಿದ್ದಾರೆ. ಕ್ಷೇತ್ರದಲ್ಲಿ ಏಕಕಾಲಕ್ಕೆ ಹಲವು ಪ್ರತ್ಯೇಕ ಗುಂಪುಗಳಾಗಿ ಪ್ರಚಾರ ನಡೆಸಲಾಗುತ್ತಿದೆ ಎಂದು ನಗರ ಬಿಜೆಪಿ ಅಧ್ಯಕ್ಷ ಪಿ.ಎನ್‌.ಸದಾಶಿವ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next