Advertisement

ಇಬ್ಬರು ಅಧಿಕಾರಿಗಳಿಗೆ ಬಡ್ತಿ, ಹೆಚ್ಚುವರಿ ಹೊಣೆ

06:34 AM Jun 22, 2019 | Lakshmi GovindaRaj |

ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಐಎಎಸ್‌ ಅಧಿಕಾರಿಗಳಿಗೆ ಬಡ್ತಿ ನೀಡಿ, ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ರಾಜಕುಮರ್‌ ಖತ್ರಿ ಅವರಿಗೆ ಡಿಪಿಎಆರ್‌ ಇಲಾಖೆ (ಜನಸ್ಪಂದನ ಕೋಶ)ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಬಡ್ತಿ ನೀಡಿ ವರ್ಗಾಯಿಸಲಾಗಿದೆ. ಅಲ್ಲದೇ ಕಂದಾಯ ಇಲಾಖೆಯ ವಿಪತ್ತು ಪರಿಹಾರ, ಭೂಮಿ ಮತ್ತು ಯುಪಿಒಆರ್‌ ವಿಭಾಗದ ಜವಾಬ್ದಾರಿಯನ್ನೂ ಮುಂದುವರಿಸಲಾಗಿದೆ.

Advertisement

ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಬಸವರಾಜ್‌ ಅವರನ್ನು ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಿ ವರ್ಗಾಯಿಸಲಾಗಿದೆ. ಹಾಲಿ ಸಾರಿಗೆ ಇಲಾಖೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನೂ ಮುಂದುವರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next