Advertisement

ಪಕ್ಷ ಸೂಚಿಸಿದಲ್ಲಿ ಪ್ರಚಾರ: ಡಿಕೆಶಿ

09:25 PM Nov 28, 2019 | Team Udayavani |

ಬೆಂಗಳೂರು: ಪಕ್ಷ ಸೂಚಿಸಿದರೆ ಗೋಕಾಕ್‌ ಸಹಿತ ಎಲ್ಲ ಕ್ಷೇತ್ರಗಳಲ್ಲಿಯೂ ಚುನಾವಣ ಪ್ರಚಾರಕ್ಕೆ ತೆರಳುವುದಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಪತ್ರಕರ್ತರ ಜತೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಗೋಕಾಕ್‌ ಒಂದೇ ಅಲ್ಲ. ಎಲ್ಲ ಕಡೆಯೂ ಪ್ರಚಾರಕ್ಕೆ ಹೋಗಬೇಕಿದೆ. ರಾಣೆಬೆನ್ನೂರು, ಹಿರೇಕೆರೂರು ಕ್ಷೇತ್ರಗಳಿಗೂ ಹೋಗುತ್ತೇನೆ. ಪಕ್ಷ ಎಲ್ಲಿ ಪ್ರಚಾರ ಮಾಡುವಂತೆ ಸೂಚನೆ ನೀಡುತ್ತದೆಯೋ ಅಲ್ಲಿ ಪ್ರಚಾರಕ್ಕೆ ಹೋಗುತ್ತೇನೆ ಎಂದರು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ದಬ್ಟಾಳಿಕೆ ನಡೆಯುತ್ತಿದೆ. ಕಾಂಗ್ರೆಸ್‌ ಕಾರ್ಯಕರ್ತರು ಯಾವ ದಬ್ಟಾಳಿಕೆಗೂ ಬಗ್ಗುವುದಿಲ್ಲ. ಚುನಾವಣೆ ಪ್ರಚಾರದ ವಿಚಾರದಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next