Advertisement

ಬಂಧನದಿಂದ ರಕ್ಷಣೆ ಕೋರಿ ನೂಪುರ್‌ ಶರ್ಮಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

09:20 PM Jul 18, 2022 | Team Udayavani |

ನವದೆಹಲಿ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಅವರು ಪ್ರವಾದಿ ಮೊಹಮ್ಮದ್‌ ಕುರಿತು ನೀಡಿದ್ದ ಹೇಳಿಕೆಗಳ ಹಿನ್ನೆಲೆ ಒಟ್ಟು 9 ಸ್ಥಳಗಳಲ್ಲಿ ಎಫ್ಐಆರ್‌ ದಾಖಲಾಗಿದ್ದು, ಅವೆಲ್ಲವನ್ನೂ ಒಗ್ಗೂಡಿಸಬೇಕೆಂದು ಅವರು ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Advertisement

ಹಾಗೆಯೇ ಬಂಧನದಿಂದ ರಕ್ಷಣೆ ನೀಡಬೇಕೆಂದೂ ಮನವಿ ಮಾಡಿದ್ದಾರೆ. ನೂಪುರ್‌ ಈ ಹಿಂದೆಯೂ ಇದೇ ವಿಚಾರವಾಗಿ ಸುಪ್ರೀಂ ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ಆದರೆ ನ್ಯಾಯಾಲಯವು ನೂಪುರ್‌ ವಿರುದ್ಧ ಕಟುವಾದ ಮಾತುಗಳನ್ನಾಡಿತ್ತು. “ನಾಲಿಗೆ ಹರಿಬಿಟ್ಟು, ಬೇಜವಾಬ್ದಾರಿ ಹೇಳಿಕೆ ಕೊಡಲಾಗಿದೆ’ ಎಂದು ಹೇಳಿತ್ತು. ಅದಾದ ನಂತರ ನೂಪುರ್‌ ಅರ್ಜಿ ವಾಪಸು ಪಡೆದಿದ್ದರು. ಇದೀಗ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿಯನ್ನು ಸುಪ್ರೀಂಕೋರ್ಟ್‌ ಮಂಗಳವಾರ ವಿಚಾರಣೆ ನಡೆಸಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next