Advertisement
ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ನಡೆದ ಬಗರ್ಹುಕುಂ ಸಾಗುವಳಿದಾರರ ಸಮಾವೇಶ ಮತ್ತು ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಅರಣ್ಯ, ಬಗರ್ಹುಕುಂ ಸಾಗುವಳಿದಾರರು ಹಕ್ಕುಪತ್ರ ವಿತರಣೆಗೆ ಆಗ್ರಹಿಸಿ ಭಾನುವಾರ ಭರಮಸಾಗರದಿಂದ ಚಿತ್ರದುರ್ಗದವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದರು. ಸೋಮವಾರ ಪಾದಯಾತ್ರೆ ಚಿತ್ರದುರ್ಗ ತಲುಪಿದ ನಂತರ ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಸಮಾವೇಶ ನಡೆಸಿದರು.
Related Articles
Advertisement
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಭೂಮಿ ಎಲ್ಲರಿಗೂ ಅತ್ಯಗತ್ಯ. ಭೂಮಿ ಇದ್ದರೆ ಬದುಕು ಎನ್ನುವ ಕಾಲ ಇದಾಗಿದೆ. ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ಭೂಮಿಯ ಹಕ್ಕುಪತ್ರ ಕೇಳುತ್ತಿರುವುದು ತಪ್ಪಲ್ಲ. ಆದರೆ ಎಷ್ಟು ದಿನ ಹೀಗೆ ಕೇಳುತ್ತಿರಬೇಕು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಚಿವರ ಬಳಿ ನಿಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸುವುದಾಗಿ ಹೇಳಿದರು.
ಮಾನವ ಸರಪಳಿ: ಕಾರ್ಯಕ್ರಮಕ್ಕೂ ಮುನ್ನ ಪಾದಯಾತ್ರೆಯಲ್ಲಿ ನಗರಕ್ಕೆ ಆಗಮಿಸಿದ ಪ್ರತಿಭಟನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಭೂ ಹಕ್ಕುದಾರರ ವೇದಿಕೆ, ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ, ಧಮ್ಮ ಸಾಂಸ್ಕೃತಿಕ ಕೇಂದ್ರ ಹಾಗೂ ಕರ್ನಾಟಕ ಬಂಜಾರ ಜನಜಾಗೃತಿ ಅಭಿಯಾನ ಸಮಿತಿಗಳು ನೇತೃತ್ವ ವಹಿಸಿಕೊಂಡಿದ್ದವು. ಕಾರ್ಯಕ್ರಮದಲ್ಲಿ ಕಸವನಹಳ್ಳಿ ರಮೇಶ್, ನಿಂಗಾ ನಾಯ್ಕ, ಅರುಣ್ಕುಮಾರ್, ವಿಶ್ವಸಾಗರ್, ಲಕ್ಷ್ಮೀಕಾಂತ್, ಹಾಲೇಶಪ್ಪ, ಲೋಲಾಕ್ಷಮ್ಮ, ಸಿದ್ಧಾ ನಾಯ್ಕ, ರಾಜಣ್ಣ, ಓಬಣ್ಣ, ಬಸವರಾಜ್ ಮತ್ತಿತರರು ಭಾಗವಹಿಸಿದ್ದರು.