Advertisement

ಸಾಧಕ ಗ್ರಾಮೀಣ ಶಾಲೆಗಳಿಗೆ ಪ್ರಶಸ್ತಿ ಪ್ರದಾನ

03:45 AM Feb 13, 2017 | Team Udayavani |

ಉಳ್ಳಾಲ: ನಿಟ್ಟೆ ಶಿಕ್ಷಣ ಸಂಸ್ಥೆ ಮತ್ತು ನಿಟ್ಟೆ ವಿ.ವಿ. ಆಶ್ರಯದಲ್ಲಿ ದ.ಕ. ಜಿಲ್ಲೆಯಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ಗ್ರಾಮೀಣ ಪ್ರದೇಶದ ಪ್ರೌಢಶಾಲೆಗಳಿಗೆ ನೀಡುವ “ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಅತ್ಯುತ್ತಮ ಶಾಲೆ ಪ್ರಶಸ್ತಿಯ 15 ಲಕ್ಷ ರೂ. ನಗದು ಬಹುಮಾನವನ್ನು ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸರಕಾರಿ ಪ್ರೌಢಶಾಲೆ ಮತ್ತು 10 ಲಕ್ಷ ರೂ. ನಗದು ಬಹುಮಾನವನ್ನು ವೇಣೂರು ಸರಕಾರಿ ಪ್ರೌಢ ಶಾಲೆಗೆ ಶನಿವಾರ ದೇರಳಕಟ್ಟೆಯ ನಿಟ್ಟೆ ವಿ.ವಿ. ಕ್ಯಾಂಪಸ್‌ನ ಕೆ.ಎಸ್‌. ಹೆಗ್ಡೆ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಾಲಾ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಯಿತು.

Advertisement

ಅತ್ಯುತ್ತಮ ಶಾಲಾ ಪುರಸ್ಕಾರ ನೆರವೇರಿಸಿ ಆಶೀರ್ವಚನ ನೀಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಮನುಷ್ಯನ ಜೀವನದಲ್ಲಿ ಶಿಕ್ಷಣ ಅತೀ ಪ್ರಾಮುಖ್ಯ. ಆಧ್ಯಾತ್ಮಿಕ ವಿದ್ಯೆ ಎನ್ನುವುದು ಶುದ್ಧ ವಿಜ್ಞಾನವಾ
ಗಿದ್ದು ಇದನ್ನು ಆಧುನಿಕ ಶಿಕ್ಷಣ ದೊಂದಿಗೆ ಮಕ್ಕಳಿಗೆ ಕಲಿಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕು. ಶಿಕ್ಷಕರು ಹಣ ಮಾಡುವ ಶಿಕ್ಷಣವನ್ನು ಕಲಿಸಿದರೆ ಅದು ಬದುಕಿಗೆ ಪೂರಕವಾಗದು. ಅಂತಹ ಶಿಕ್ಷಣ ಪಡೆದ ಮಕ್ಕಳು ತಮ್ಮ ವೈಯಕ್ತಿಕ ಜೀವನದಲ್ಲಿ ಬರುವಂತಹ ಸಣ್ಣ ಸಮಸ್ಯೆಯನ್ನೂ ಎದುರಿಸಲಾಗದ ಸ್ಥಿತಿಗೆ ತಲುಪುತ್ತಾರೆ ಎಂದು ಹೇಳಿದರು.

ಶ್ಲಾಘನೀಯ ಕಾರ್ಯ 

ಹಿಂದೆ ಮೈಸೂರು ಪ್ರಾಂತ್ಯದಲ್ಲಿ ಸಾಕ್ಷರತೆ ಶೇ. 5ರಷ್ಟಿತ್ತು. ಖಾಸಗಿ ಶಾಲೆಗಳ ಹಾಗೂ ಸರಕಾರಿ ವ್ಯವಸ್ಥೆಯಿಂದ ಸದ್ಯ ಶೇ. 76ಕ್ಕೆ ಬಂದು ನಿಂತಿದೆ. ಖಾಸಗಿ ಸಂಸ್ಥೆಗಳು ಸಮಾಜಕ್ಕೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಗುರುತರವಾದ ಕಾರ್ಯವನ್ನು ಮಾಡಿಕೊಂಡು ಬಂದಿದೆ. ಈ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಅದರಲ್ಲೂ ಸರಕಾರಿ ಶಾಲೆಗಳನ್ನು ಗುರುತಿಸಿ ಆ ಶಾಲೆಗೆ ಆರ್ಥಿಕ ಸಹಾಯವನ್ನು ಮಾಡುವ ಮೂಲಕ ಉನ್ನತ ಸ್ಥಿತಿಯಲ್ಲಿರುವ ನಿಟ್ಟೆ ಶಿಕ್ಷಣ ಸಂಸ್ಥೆಯು ಪ್ರಜ್ಞಾವಂತ ರಾಗಿದ್ದು ಅತ್ಯುತ್ತಮ ಶಾಲಾ ಪುರಸ್ಕಾರ ನೀಡುವ ಮೂಲಕ ಕತ್ತಲಿನಲ್ಲಿ ರುವವರಿಗೆ ಬೆಳಕನ್ನು ನೀಡುವ ಕಾರ್ಯ ಶ್ಲಾಘನೀಯ ಎಂದರು.

ನಡ, ತಾಕೊಡೆ ಶಾಲೆಗೂ ನೆರವು
ಶೈಕ್ಷಣಿಕ ಅಭಿವೃದ್ಧಿ ನಡೆಸಿರುವ ಬೆಳ್ತಂಗಡಿಯ ನಡ ಸರಕಾರಿ ಪ್ರೌಢ ಶಾಲೆಗೆ ಒಂದು ಲಕ್ಷ ರೂ. ನಗದು ಮತ್ತು ಮೂಡಬಿದಿರೆ ತಾಕೊಡೆಯ ಆದರ್ಶ ಪ್ರೌಢಶಾಲೆಗೆ ಎರಡು ಲಕ್ಷ ರೂ. ಆರ್ಥಿಕ ನೆರವಿನ ಚೆಕ್ಕನ್ನು ವಿತರಿಸಲಾಯಿತು. ನಿಟ್ಟೆ ವಿ.ವಿ.ಯ ಕುಲಾಧಿಪತಿ ಎನ್‌. ವಿನಯ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಾಸನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಶಂಭೂನಾಥ ಸ್ವಾಮೀಜಿ, ನಿವೃತ್ತ ಲೋಕಾಯುಕ್ತ ಎನ್‌. ಸಂತೋಷ್‌ ಹೆಗ್ಡೆ, ನಿಟ್ಟೆ ವಿ.ವಿ.ಯ ಉಪಕುಲಾಪತಿ ಡಾ| ಶಾಂತಾರಾಮ ಶೆಟ್ಟಿ, ಬೆಂಗಳೂರು ವಿ.ವಿ. ವಿಶ್ರಾಂತ ಉಪಕುಲಪತಿ ಡಾ| ಎನ್‌.ಆರ್‌. ಶೆಟ್ಟಿ, ಮಂಗಳೂರು ವಿ.ವಿ. ಉಪಕುಲಪತಿ ಪ್ರೊ| ಕೆ. ಭೈರಪ್ಪ, ಡಿಡಿಪಿಐ ವಾಲ್ಟರ್‌ ಡಿಮೆಲ್ಲೋ, ಟ್ರಸ್ಟಿಗಳಾದ ಬಿ.ಆರ್‌. ಹೆಗ್ಡೆ, ಗುರುಪ್ರಸಾದ್‌ ಅಡ್ಯಂತಾಯ ಉಪಸ್ಥಿತರಿದ್ದರು.

Advertisement

ಹಣಕಾಸು ವಿಭಾಗ ನಿರ್ದೇಶಕ ರಾಜೇಂದ್ರ ಎಂ. ಸ್ವಾಗತಿಸಿದರು. ಪಠ್ಯೇತರ ವಿಭಾಗದ ನಿರ್ದೇಶಕ ಪ್ರೊ| ರಾಜಶೇಖರ್‌ ಎಂ. ಕಾರ್ಯಕ್ರಮ ನಿರ್ವಹಿಸಿದರು ನಿಟ್ಟೆ ವಿ.ವಿ.ಯ ಕುಲ ಸಚಿವ ಡಾ| ಎಂ.ಎಸ್‌. ಮೂಡಿತ್ತಾಯ ವಂದಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next