Advertisement

ಏರೋ ಶೋ ನಗರದಲ್ಲೇ ನಡೆಸಲು ಪ್ರತಿಭಟನೆ

11:22 AM Aug 17, 2018 | Team Udayavani |

ಬೆಂಗಳೂರು: ವೈಮಾನಿಕ ಪ್ರದರ್ಶನ “ಏರೋ ಇಂಡಿಯಾ ಶೋ’ ಅನ್ನು ಬೆಂಗಳೂರಿನಿಂದ ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಎಂದು ಒತ್ತಾಯಿಸಿ ಗುರುವಾರ ನಗರದಲ್ಲಿ ಎನ್‌ಎಸ್‌ಯುಐ ಪ್ರತಿಭಟನೆ ನಡೆಸಿತು. 

Advertisement

ಎರಡು ದಶಕಗಳಿಂದ ಬೆಂಗಳೂರಿನಲ್ಲಿ ಪ್ರತಿಷ್ಠಿತ ವೈಮಾನಿಕ ಪ್ರದರ್ಶನ ನಡೆದುಕೊಂಡು ಬರುತ್ತಿದೆ. ಆದರೆ, ಈಗ ಏಕಾಏಕಿ ಉತ್ತರ ಪ್ರದೇಶದ ಲಖನೌಗೆ ಸ್ಥಳಾಂತರಿಸಲು ಮುಂದಾಗಿರುವುದು ಖಂಡನೀಯ. ಕೂಡಲೇ ರಕ್ಷಣಾ ಸಚಿವರು ಈ ಆಲೋಚನೆಯಿಂದ ಹಿಂದೆಸರಿಯಬೇಕು ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಆಗ್ರಹಿಸಿದರು. 

ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಎಸ್‌. ಮಂಜುನಾಥ್‌ ಮಾತನಾಡಿ, ಹಿಂದುಳಿದ ಉತ್ತರ ಪ್ರದೇಶದ ಲಖನೌಗೆ ಸ್ಥಳಾಂತರಿಸುತ್ತಿರುವುದು ತಾಂತ್ರಿಕವಾಗಿ ಸರಿಯಾದ ಕ್ರಮ ಅಲ್ಲ ಎಂದರು. ನಂತರ ಅಲಿಆಸ್ಕರ್‌ ರಸ್ತೆಯಲ್ಲಿರುವ ರಕ್ಷಣಾ ಸಚಿವರ ಕಚೇರಿಗೆ ತೆರಳಿ ಈ ಸಂಬಂಧ ಮನವಿ ಸಲ್ಲಿಸಲಾಯಿತು. ಇದೇ ವೇಳೆ ರಾಜ್ಯಾದ್ಯಂತ ಕಾಲೇಜು ವಿದ್ಯಾರ್ಥಿಗಳಿಂದ ಸಹಿ ಸಂಗ್ರಹದ ಪ್ರತಿಯನ್ನೂ ಸಲ್ಲಿಸಲಾಯಿತು. ಮನವಿ ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next