Advertisement
ನಗರದ ಜಿಲ್ಲಾಸ್ಪತ್ರೆ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಪಂ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ವಸತಿ ನಿಲಯಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ರಕ್ಷಣಾ ನೀತಿ ಕುರಿತು ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಸತಿನಿಲಯಗಳ ಮೇಲ್ವಿಚಾರಕರಿಗೆ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ರಕ್ಷಣೆ, ಬಾಲ್ಯ, ಸುರಕ್ಷತೆ ಪ್ರತಿಯೊಬ್ಬರ ನಾಗರಿಕನ ಕರ್ತವ್ಯವಾಗಿದ್ದು, ಮಕ್ಕಳಿಗೆ ಸಂಬಂಧಿಸಿದಂತೆ ಸಾಕಷ್ಟು ಹಕ್ಕುಗಳನ್ನು ಸಂವಿಧಾನದಲ್ಲಿ ನೀಡಲಾಗಿದೆ ಎಂದರು.
Related Articles
Advertisement
ನಿಮ್ಮ ಜವಾಬ್ದಾರಿ: ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ದೇವರಾಜ್ ಮಾತನಾಡಿ, ವಸತಿನಿಲಯದಲ್ಲಿ ಓದುತ್ತಿರುವ ಮಕ್ಕಳು ಬಾಲವಾಡಿಯಿಂದ ಪ್ರಾರಂಭವಾಗಿ ಪದವಿ ತರಗತಿವರೆಗೆ ನಿಲಯದ ಮೇಲ್ವಿಚಾರಕರ ಒಡನಾಟದಲ್ಲಿ ಬೆಳೆಯುತ್ತಾರೆ. ಮಕ್ಕಳು ತಮ್ಮ ಬಾಲ್ಯದ ಶೇ.70 ರಷ್ಟು ಭಾಗದ ಜೀವನವನ್ನು ವಸತಿನಿಲಯಗಳಲ್ಲಿ ಕಳೆಯುವುದರಿಂದ ಅಲ್ಲಿನ ವಾತಾವರಣ ಹಾಗೂ ಅಧಿಕಾರಿಗಳನ್ನು ಅನುಕರಿಸುವುದರಿಂದ ವಸತಿ ನಿಲಯಗಳ ಮೇಲ್ವಿಚಾರಕರು ಅವರಿಗೆ ಮಾದರಿಯಾಗಿರಬೇಕು.
ಮಕ್ಕಳ ಬಾಲ್ಯ ಕಸಿಯದೆ ಅವರಿಗಿರುವ ಹಕ್ಕುಗಳ ರಕ್ಷಣೆ ಮಾಡುವುದು ನಿಮ್ಮ ಜವಾಬ್ದಾರಿ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ಆರ್. ರಾಜಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಸಂಪನ್ಮೂಲ ವ್ಯಕ್ತಿ ಕೊಪ್ಪಳದ ಮಕ್ಕಳ ಸಂರಕ್ಷಣಾ ಯೋಜನೆಯ ಸಂಯೋಜಕ ಕೆ.ರಾಘವೇಂದ್ರ ಭಟ್, ಅಂಬಿಕಾ ಜಿಲ್ಲೆಯ ವಿವಿಧ ವಸತಿನಿಲಯಗಳ ಮೇಲ್ವಿಚಾರಕರು, ಸಿಬ್ಬಂದಿ ಇತತರು ಇದ್ದರು.
ಆತಂಕಕಾರಿ ಬೆಳವಣಿಗೆ: ಜಿಪಂ ಸಿಇಒ ಶುಭಾ ಕಲ್ಯಾಣ್ ಮಾತನಾಡಿ, ವಸತಿನಿಲಯಗಳ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ಮಕ್ಕಳ ಸುರಕ್ಷತೆಗಾಗಿ ನಿಲಯದ ಸುತ್ತ ಆಗಿಂದಾಗ್ಗೆ ಪರಿಶೀಲಿಸಬೇಕು. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ, ವಿಶೇಷ ಜ್ಞಾನವನ್ನು ಹುಡುಕಿ ಬೆಳಕಿಗೆ ತರುವ ಪ್ರಯತ್ನ ಮಾಡಬೇಕು. ಮಕ್ಕಳಿಗೆ ಉತ್ತಮ ವಾತಾವರಣ ಸೃಷ್ಟಿಸಬೇಕು. ಮಕ್ಕಳು ಸೈಬರ್ ಅಪರಾಧಗಳಲ್ಲಿ ಹೆಚ್ಚಾಗಿ ಭಾಗಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ನಿಟ್ಟಿನಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಸ್ಮಾರ್ಟ್ಫೋನ್ಗಳಿಂದ ದೂರವಿಡಬೇಕು. ಹೆಣ್ಣಿರಲಿ, ಗಂಡಿರಲಿ 3 ವರ್ಷದ ಮಕ್ಕಳಿಂದ ಹಿಡಿದು ಪ್ರೌಢಾವಸ್ಥೆವರೆಗಿನ ಮಕ್ಕಳಿಗೆ ಗುಡ್ ಟಚ್ ಹಾಗೂ ಬ್ಯಾಡ್ ಟಚ್ ಬಗ್ಗೆ ತಿಳಿವಳಿಕೆ ಹೇಳಬೇಕು ಎಂದರು.