Advertisement

ಪೊಲೀಸರ ಮೂಲಕ ದೌರ್ಜನ್ಯ

01:56 PM Feb 07, 2021 | Team Udayavani |

ಮಾಸ್ತಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಶನಿವಾರ ಕರೆ ನೀಡಿದ್ದ ಹೆದ್ದಾರಿ ಬಂದ್‌ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಮಾಸ್ತಿ ಸಮೀಪದ ಮಾಲೂರು-ಬೇರಿಕಿ ರಸ್ತೆ ಕತ್ತರಹಳ್ಳಿ ಕ್ರಾಸ್‌ ಬಳಿ ಪ್ರತಿಭಟನೆ ನಡೆಸಿದರು.

Advertisement

ಕೇಂದ್ರ ಸರ್ಕಾರ ಕೂಡಲೇ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು. ದೆಹಲಿಯಲ್ಲಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ರೈತರನ್ನು ತಡೆದು ಪೊಲೀಸರ ಮೂಲಕ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

 ಇದನ್ನೂ ಓದಿ:ಬಹುರಾಷ್ಟ್ರೀಯ ಕಂಪನಿಗಳ ಪರ ಸರ್ಕಾರ

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಹೊಸಹಳ್ಳಿ ವೆಂಕಟೇಶ್‌, ಮಾಸ್ತಿ ಹೋಬಳಿ ಅಧ್ಯಕ್ಷ ಉಪ್ಪಾರಹಳ್ಳಿ ಆಂಜಿನಪ್ಪ, ಯಲ್ಲಪ್ಪ, ವೆಂಕಟಸ್ವಾಮಿ, ಆನಂದ್‌, ಶ್ರೀನಿವಾಸ್‌, ಶೇಖರ್‌, ಮುನಿರಾಜು, ನಾರಾಯಣಸ್ವಾಮಿ, ದೇವರಾಜು, ಸಂದೇಶ್‌ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next