Advertisement

ಅರಣ್ಯಾಧಿಕಾರಿಗಳ ದೌರ್ಜನ್ಯ ಆರೋಪ: ಅಮಾಸೆಬೈಲು ಫಾರೆಸ್ಟ್ ಕಚೇರಿಗೆ ಮುತ್ತಿಗೆ ಪ್ರತಿಭಟನೆ

11:55 AM Feb 15, 2021 | Team Udayavani |

ಸಿದ್ದಾಪುರ: ಅಮಾಸೆಬೈಲು ವಲಯದ ವನ್ಯಜೀವಿ ವಲಯದ ವಿಭಾಗದ ಅಧಿಕಾರಗಳು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಅಮಾಸೆಬೈಲು ಗ್ರಾಮಸ್ಥರು ಅರಣ್ಯಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

Advertisement

ಅಮಾಸೆಬೈಲಿನ ಗೋಳಿಕಾಡು ನಿವಾಸಿ ಮಾಲತಿ ಎಂಬವರ ಮಗ ನಟರಾಜ ಮತ್ತು ಸ್ಥಳೀಯ ಆನಂದ ಶೆಟ್ಟಿ ಅವರು ಎರ್ ಗನ್ ಹಿಡಿದುಕೊಂಡು ರಾತ್ರಿ ಬೈಕ್ ನಲ್ಲಿ ಬರುತ್ತಿದ್ದಾಗ ವನ್ಯಜೀವಿ ವಲ ಸಂರಕ್ಷಾಣಾಧಿಕಾರಿಯವರು ತಂಡದೊಂದಿಗೆ ತಡೆದಿದ್ದರು. ಎರ್ ಗನ್ ಮತ್ತು ಬೈಕ್ ನ್ನು ವಶಕ್ಕೆ ಪಡೆದು, ಇವರನ್ನೂ ಬಂಧಿಸಿ ಜಾಮೀನು ರಹಿತ ಕೇಸ್ ದಾಖಲಿಸಿದ್ದರು.

ಇದನ್ನೂ ಓದಿ:ಶ್ರೀರಾಮಮಂದಿರ ನಿರ್ಮಾಣ ಭಾವನಾತ್ಮಕ ವಿಚಾರ: ಕೇಂದ್ರ ಸಚಿವ ಸದಾನಂದ ಗೌಡ

ಆದರೆ ತನ್ನ ಮಗ ಯಾವುದೇ ಮಾರಾಕಾಸ್ತ್ರ ಹೊಂದಿರಲಿಲ್ಲ. ಯಾವುದೇ ಕಾನೂನು ವಿರೋಧಿ ಕೃತ್ಯ ಮಾಡಿರಲಿಲ್ಲ. ಆದರೆ ಆತನ ಮೇಲೆ ದೌರ್ಜನ್ಯ ಎಸಗಲಾಗಿದೆ. ನಟರಾಜ ಮತ್ತು ಸ್ಥಳೀಯ ಆನಂದ ಶೆಟ್ಟಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಮಾಲತಿ ಅವರು ಗ್ರಾಮಸ್ಥರೊಂದಿಗೆ ಇಂದು ಅಮಾಸೆಬೈಲು ಗ್ರಾಮಸ್ಥರು ಅರಣ್ಯಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

Advertisement

ಇದನ್ನೂ ಓದಿ: ಪ್ರೇಮಿಗಳ ದಿನಾಚರಣೆ ವಾರದಲ್ಲಿ 25 ಲಕ್ಷ ಗುಲಾಬಿ ಹೂ ಮಾರಾಟ!

Advertisement

Udayavani is now on Telegram. Click here to join our channel and stay updated with the latest news.

Next